Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ಶುರು

Krishnaveni K
ಮಂಗಳವಾರ, 24 ಸೆಪ್ಟಂಬರ್ 2024 (17:37 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಸರಿ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೇ ಇತ್ತ ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ.

ಸಿಎಂ ವಿರುದ್ಧ ತೀರ್ಪು ಬರುತ್ತಿದ್ದಂತೇ ಬಿಜೆಪಿ ನಾಯಕರು ಹೇಳಿಕೆ ನೀಡಲಾರಂಭಿಸಿದ್ದು ತಕ್ಷಣವೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್, ಬಿವೈ ವಿಜಯೇಂದ್ರ, ಸಿಟಿ ರವಿ ಮುಂತಾದವರು ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಇದರ ಬೆನ್ನಲ್ಲೇ ಇಂದು ಬೆಂಗಳೂರಿನಲ್ಲಿ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆಯನ್ನೂ ನಡೆಸಿದೆ. ವಿಧಾನಪರಿಷತ್ ಸದಸ್ಯರಾದ ಸಿಟಿ ರವಿ, ಎನ್ ರವಿಕುಮಾರ್ ನೇತೃತ್ವದಲ್ಲಿ ಬಿಜೆಪಿ ಇಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂಭಾಗ ಘೋಷಣೆ ಕೂಗಿ ಪ್ರತಿಭಟನೆ ನಡೆಸಿತು.

ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಪತ್ರಿಕಾಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೆಲ್ಲಾ ಬಿಜೆಪಿ ಪಿತೂರಿ ಎಂದಿದ್ದಾರೆ. ಇನ್ನೊಂದೆಡೆ ಇಡೀ ಕಾಂಗ್ರೆಸ್ ಪಕ್ಷವೇ ತಮ್ಮ ಬೆಂಬಲಕ್ಕಿದೆ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments