ಗ್ಯಾರಂಟಿಗೆ ಹಣ ಹೊಂದಿಸಲು ಶಾಲಾ ಮಕ್ಕಳ ಸಮವಸ್ತ್ರಕ್ಕೆ ಕತ್ತರಿ: ಸರ್ಕಾರದ ಬಳಿ ಅಷ್ಟೂ ದುಡ್ಡಿಲ್ವಾ

Krishnaveni K
ಬುಧವಾರ, 27 ನವೆಂಬರ್ 2024 (14:14 IST)
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಶಾಲಾ ಮಕ್ಕಳ ಸಮವಸ್ತ್ರಕ್ಕೂ ಕತ್ತರಿ ಹಾಕಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ ಟೀಕಾ ಪ್ರಹಾರ ನಡೆಸಿದೆ.

ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರ ಸಮವಸ್ತ್ರ ವಿತರಿಸುತ್ತದೆ. ಆದರೆ ಈ ವರ್ಷ ಶಾಲಾರಂಭದಲ್ಲಿ ಒಂದು ಜೊತೆ ಬಟ್ಟೆ ನೀಡಲಾಗಿತ್ತು. ಎರಡನೇ ಜೊತೆ ಅಕ್ಟೋಬರ್ ನಲ್ಲಿ ನೀಡಬೇಕಿತ್ತು. ಆದರೆ ಈಗ ವರ್ಷಾಂತ್ಯವಾಗುತ್ತಿದ್ದು, ಇನ್ನೂ ಮಕ್ಕಳಿಗೆ ಇನ್ನೊಂದು ಜೊತೆ ಸಮವಸ್ತ್ರ ಸಿಕ್ಕಿಲ್ಲ ಎಂಬ ಆರೋಪ ಕೇಳಿಬಂದಿದೆ.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹಲವು ಯೋಜನೆಗಳಿಗೆ ಕತ್ತರಿ ಹಾಕಿದೆ ಎಂಬ ಆರೋಪವಿದೆ. ಆ ಪೈಕಿ ಈಗ ಮಕ್ಕಳ ಸಮವಸ್ತ್ರವೂ ಸೇರಿಕೊಂಡಿತಾ ಎಂಬ ಅನುಮಾನ ಮೂಡಿದೆ. ಇದುವರೆಗೆ ಮಕ್ಕಳಿಗೆ ಒಂದು ಜೊತೆ ಯೂನಿಫಾರಂ, ಒಂದು ಜೊತೆ ಸಾಕ್ಸ್ ಮಾತ್ರ ನೀಡಲಾಗಿದೆ.

ಈ ಬಗ್ಗೆ ಟೀಕಾ ಪ್ರಹಾರ ನಡೆಸಿರುವ ಬಿಜೆಪಿ, ‘ಗ್ಯಾರಂಟಿಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಕ್ಕಳಿಗೆ ಸಮವಸ್ತ್ರ ವಿತರಿಸುವುದಕ್ಕೂ ದುಡ್ಡಿಲ್ಲ. ಸ್ವಯಂ ಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯನವರೇ, ವಿವೇಚನೆಯಿಲ್ಲದ ನೀತಿಗಳಿಂದ ರಾಜ್ಯದ ಆರ್ಥಿಕತೆಯ ತೇರು ನಿಂತು ಹೋಗಿದೆ. ದಿವಾಳಿ ಘೋಷಣೆಯಷ್ಟೇ ಬಾಕಿ ಉಳಿದಿರುವುದು. ತಾವು ಕುರ್ಚಿಯಿಂದ ತೊಲಗದ ಹೊರತು ರಾಜ್ಯದ ಜನರಿಗೆ ನೆಮ್ಮದಿಯಿಲ್ಲ’ ಎಂದು ಟೀಕಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments