Webdunia - Bharat's app for daily news and videos

Install App

ಬೆಲೆ ಏರಿಕೆಯೇ ಬಂಡವಾಳ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆಳುವ ಯೋಗ್ಯತೆಯೇ ಇಲ್ಲ

Krishnaveni K
ಮಂಗಳವಾರ, 25 ಜೂನ್ 2024 (14:16 IST)
ಬೆಂಗಳೂರು: ನಂದಿನಿ ಹಾಲಿನ ಬೆಲೆ ಏರಿಕೆಯಾದ ಬೆನ್ನಲ್ಲೇ ರಾಜ್ಯ ಬಿಜೆಪಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿಮಗೆ ಆಳುವ ಯೋಗ್ಯತೆಯೇ ಇಲ್ಲ ಎಂದು ಬಿಜೆಪಿ ಜರೆದಿದೆ.

ನಂದಿನಿ ಹಾಲಿನ ದರ ಏರಿಕೆ ಮಾಡುತ್ತಿದ್ದಂತೇ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿರುವ ಕರ್ನಾಟಕ ಬಿಜೆಪಿ ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ನೀವು, ಈಗ ಗ್ರಾಹಕರಿಗೆ ವಿಷವುಣಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಹಾಲು ಉತ್ಪಾದಕರಿಗೆ ಸಬ್ಸಿಡಿ ನೀಡದೇ ಭಂಡತನ ಮಾಡಿರುವ ಸರ್ಕಾರ ಈಗ ಏಕಾಏಕಿ ಹಾಲಿನ ದರವನ್ನು 2.10 ರೂ.ಗೆ ಏರಿಸಿ ಗಾಯದ ಮೇಲೆ ಬರೆ ಎಳೆಯುತ್ತಿದೆ ಎಂದಿದೆ.

‘ಸಿಎಂ ಸಿದ್ದರಾಮಯ್ಯನವರೇ ಹಾಲು ಉತ್ಪಾದಕರಿಗೆ 1087 ಕೋಟಿ ರೂ. ಸಬ್ಸಿಡಿ ಹಣವನ್ನು ನೀಡದೇ ಬಾಕಿ ಉಳಿಸಿಕೊಂಡಿರುವ ನೀವು ಈಗ  ಗ್ರಾಹಕರಿಗೆ ಬೆಲೆಯೇರಿಕೆ ಶಿಕ್ಷೆ ನೀಡಿರುವುದು ಯಾವ ಪುರುಷಾರ್ಥಕ್ಕೆ. ನಿಮ್ಮದು ಕೇವಲ ರೈತ ವಿರೋಧಿ ಸರ್ಕಾರ ಮಾತ್ರವಲ್ಲ, ನಿಮ್ಮದು ಜನ ವಿರೋಧಿ ಸರ್ಕಾರವೂ ಹೌದು. ಬೆಲೆ ಏರಿಕೆಯನ್ನೇ ಬಂಡವಾಳವನ್ನಾಗಿಸಿಕೊಂಡಿರುವ ನೀವು ಆಳಲು ಯೋಗ್ಯರಲ್ಲ ಎಂಬುದಂತೂ ಸಾಭೀತಾಗಿದೆ, ಜನ ತಾಳ್ಮೆ ಕಳೆದುಕೊಳ್ಳುವ ಮೊದಲು ಕುರ್ಚಿ ಬಿಟ್ಟು ತೊಲಗಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಇತ್ತೀಚೆಗೆ ರಾಜ್ಯ ಸರ್ಕಾರ ಸುಂಕ ಹೆಚ್ಚಿಸಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿದಾಗ ರಾಜ್ಯ ಬಿಜೆಪಿ ಘಟಕ ಭಾರೀ ಪ್ರತಿಭಟನೆ ನಡೆಸಿತ್ತು. ಅದರ ಬೆನ್ನಲ್ಲೇ ಈಗ ಮಧ್ಯಮ ವರ್ಗದವರಿಗೆ ಬರೆ ಎಳೆಯುವಂತೆ ಹಾಲಿನ ದರ ಏರಿಕೆ ಮಾಡಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments