ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ನಮ್ಮ ಭೂಮಿ, ನಮ್ಮ ಹಕ್ಕು ಹೋರಾಟ

Krishnaveni K
ಶನಿವಾರ, 16 ನವೆಂಬರ್ 2024 (10:20 IST)
ಬೆಂಗಳೂರು: ರೈತರ ಜಮೀನಿನ ಪಹಣಿಗಳಲ್ಲಿ ವಕ್ಫ್ ಮಂಡಳಿ ಮೊಹರು ಹಾಕುತ್ತಿರುವುದರ ವಿರುದ್ಧ ಸಿಡಿದೆದ್ದು ರಾಜ್ಯ ಬಿಜೆಪಿ ಘಟಕ ನಮ್ಮ ಭೂಮಿ ನಮ್ಮ ಹಕ್ಕು ಹೋರಾಟ ಮಾಡಲು ನಿರ್ಧರಿಸಿದೆ.

ನಿನ್ನೆಯಷ್ಟೇ ಚಿಕ್ಕಬಳ್ಳಾಪುರದಲ್ಲಿ ರೈತರು ಉಳುಮೆ ಮಾಡಲು ಹೊರಟಾಗ ಅದು ವಕ್ಫ್ ಭೂಮಿಯೆಂದು ವಾಗ್ವಾದವೇ ನಡೆದಿತ್ತು. ಈ ಸಂಬಂಧ ರೈತರ ವಿರುದ್ಧವೇ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಲ್ಲದೆ ಕೇಸ್ ಕೂಡಾ ದಾಖಲಿಸಿದ್ದಾರೆ. ವಕ್ಫ್  ವಿವಾದ ಈಗ ರೈತರ ಆಕ್ರೋಶವಾಗಿ ಮಾರ್ಪಟ್ಟಿದೆ.

ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಘಟಕ ಈ ವಿಚಾರವಾಗಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ ಹೋರಾಟ ನಡೆಸಲು ತೀರ್ಮಾನಿಸಿದೆ. 3 ತಂಡ ರಚಿಸಿ ರಾಜ್ಯಾದ್ಯಂತ ಪ್ರವಾಸ ಮಾಡಿ ವಕ್ಫ್ ನೋಟಿಸ್ ಬಗ್ಗೆ ವಾಸ್ತವಿಕ ಅಂಶವನ್ನು ಹೊರಗೆಳೆಯಲು ಬಿಜೆಪಿ ಘಟಕ ತೀರ್ಮಾನಿಸಿದೆ. ಪ್ರವಾಸದ  ವೇಳೆ ಕಂಡುಬಂದ ಅಂಶಗಳನ್ನು ಜಂಟಿ ಸಂಸದೀಯ ಕಮಿಟಿ ಮುಂದೆ ಮಂಡಿಸಲು ಬಿಜೆಪಿ ತೀರ್ಮಾನಿಸಿದೆ.

1954 ರಿಂದ ಆರಂಭವಾದ ವಕ್ಫ್ ಗೆಜೆಟ್ ಆದೇಶ ರದ್ದು ಮಾಡಬೇಕು, ವಕ್ಫ್ ಕ್ಲೇಮ್ ಮಾಡುತ್ತಿರುವ ರೈತರು, ಮಠಗಳು, ಸರ್ಕಾರಿ ಜಮೀನು ವಾಪಸ್ ಮಾಡಬೇಕು. ವಕ್ಫ್ ಮಂಡಳಿ ಕುರಿತಾದ ಅನ್ವರ್ ಮಾಣಿಪ್ಪಾಡಿ ವರದಿ ಜಾರಿಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನಿಟ್ಟುಕೊಂಡು ಬಿಜೆಪಿ ಪ್ರತಿಭಟನೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments