Webdunia - Bharat's app for daily news and videos

Install App

Karnataka Budget live: ಮುಸ್ಲಿಂ ಸ್ಮಶಾನ ಮತ್ತು ವಕ್ಫ್ ಆಸ್ತಿ ರಕ್ಷಣೆಗೆ 150 ಕೋಟಿ ಕೊಡುಗೆ ಕೊಟ್ಟ ಸಿದ್ದರಾಮಯ್ಯ

Krishnaveni K
ಶುಕ್ರವಾರ, 7 ಮಾರ್ಚ್ 2025 (11:34 IST)
ಬೆಂಗಳೂರು: ಕರ್ನಾಟಕ ಬಜೆಟ್ 2025 ರಲ್ಲಿ ಸಿಎಂ ಸಿದ್ದರಾಮಯ್ಯ ಮುಸ್ಲಿಮರ ಸ್ಮಶಾನ ಮತ್ತು ವಕ್ಫ್ ಆಸ್ತಿ ರಕ್ಷಣೆಗಾಗಿ 150 ಕೋಟಿ ರೂ. ಮೀಸಲಿಟ್ಟಿದ್ದಾರೆ.

ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ವಕ್ಫ್ ಆಸ್ತಿ ಕಬಳಿಕೆ ವಿವಾದ ತಾರಕಕ್ಕೇರಿತ್ತು. ಇದೀಗ ಕೇಂದ್ರ ಸರ್ಕಾರ ಸಂಸತ್ ನಲ್ಲಿ ವಕ್ಫ್ ಆಸ್ತಿ ತಿದ್ದುಪಡಿ ಬಿಲ್ ಮಸೂದೆ ಮಂಡಿಸಿದೆ. ಈ ವಿವಾದಗಳ ನಡುವೆ ವಕ್ಫ್ ಆಸ್ತಿ ರಕ್ಷಣೆಗಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿದೆ.

ದೇಶದಾದ್ಯಂತ ವಕ್ಫ್ ಆಸ್ತಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಸಿಎಂ ಇಂತಹದ್ದೊಂದು ಅನುದಾನ ಘೋಷಣೆ ಮಾಡಿರುವುದು ಮತ್ತೆ ಚರ್ಚೆಗೆ  ಗುರಿಯಾಗಲಿದೆ. ಕೇಂದ್ರ ಸರ್ಕಾರದ ವಕ್ಫ್ ಆಸ್ತಿ ತಿದ್ದುಪಡಿ ನಿಯಮವನ್ನು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ವಿರೋಧಿಸುತ್ತಲೇ ಬಂದಿದ್ದಾರೆ.

ವಕ್ಫ್ ಮಂಡಳಿ ಮುಸ್ಲಿಮರ ವೈಯಕ್ತಿಕ ಮಂಡಳಿ. ಅದರಲ್ಲಿ ನಾವು ಕೈ ಹಾಕಲು ಹೋಗಬಾರದು ಎಂದಿದ್ದರು. ಇದೀಗ ಬಜೆಟ್ ನಲ್ಲಿ 150 ಕೋಟಿ ರೂ. ಅನುದಾನ ಘೋಷಿಸುವ ಮೂಲಕ ಬಂಪರ್ ಕೊಡುಗೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Operation Sindoor: ಮತ್ತೆ ಬಾಲ ಬಿಚ್ಚಿದ ಪಾಪಿಸ್ತಾನ: ಪ್ರತಿದಾಳಿಗೆ ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

Operation Sindoor: 18 ವಿಮಾನಗಳು ಬಂದ್, 200 ವಿಮಾನಗಳು ರದ್ದು: ವಿಮಾನ ಪ್ರಯಾಣಿಕರು ಈ ಸೂಚನೆ ಗಮನಿಸಿ

ಸಿಂಧೂರರಾಮಯ್ಯನಾದ ಸಿದ್ದರಾಮಯ್ಯ: ಸಿಎಂ ವರಸೆ ಬಗ್ಗೆ ಪ್ರತಾಪ ಸಿಂಹ ಟೀಕೆ

ಮುಂದಿನ ಸುದ್ದಿ
Show comments