ಬೆಂಗಳೂರು: ಕರ್ನಾಟಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನಿಜಕ್ಕೂ ಲಾಭದಾಯಕವಾಗುವಂತಹ ಕೊಡುಗೆಯೊಂದನ್ನು ನೀಡಿದ್ದಾರೆ.
ಈ ಬಜೆಟ್ ನಲ್ಲಿ ಕೃಷಿ, ಮೂಲಸೌಕರ್ಯಾಭಿವೃದ್ಧಿಗೆ ಸಿಎಂ ಹೆಚ್ಚಿನ ಒತ್ತು ನೀಡಿದ್ದಾರೆ. ಜೊತೆಗೆ ಎಸ್ ಸಿ/ ಎಸ್ ಟಿ ಸಮುದಾಯದವರ ಅನುದಾನ ಕಿತ್ತುಕೊಳ್ಳಲಾಗಿದೆ ಎಂಬ ಆರೋಪದಿಂದ ಪಕ್ಷಕ್ಕೆ ಹಿನ್ನಡೆಯಾಗದಂತೆ ಎಚ್ಚರಿಕೆ ನಡೆಯೊಂದನ್ನು ಇಟ್ಟಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ.
ಇನ್ನು ಮುಂದೆ ಸರ್ಕಾರೀ ಕಾಮಗಾರಿಗಳ ಗುತ್ತಿಗೆಯಲ್ಲಿ ಎಸ್ ಸಿ/ಎಸ್ ಟಿ ಸಮುದಾಯದವರಿಗೆ ಮೀಸಲಾತಿ ನೀಡುವ ಘೋಷಣೆ ಮಾಡಿದ್ದಾರೆ. 2 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಈ ಮೀಸಲಾತಿ ಜಾರಿಗೆ ಬರಲಿದೆ.
ಇದುವರೆಗೆ ಮುಸ್ಲಿಂ ಸಮುದಾಯದವರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿತ್ತು. ಆದರೆ ಇದಕ್ಕೆ ವಿಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ನೀಡುವ ಘೋಷಣೆ ಮಾಡಲಾಗಿದೆ.