Webdunia - Bharat's app for daily news and videos

Install App

ಲೈವ್‌ನಲ್ಲಿ ಬರೀ ನಿಮ್ ಮುಖ ನೋಡ್ಕೊ ಬೇಕಾ: ವಿರೋಧ ಪಕ್ಷದ ದೂರಿಗೆ ಸ್ಪೀಕರ್ ಸುಸ್ತು

Sampriya
ಮಂಗಳವಾರ, 4 ಮಾರ್ಚ್ 2025 (16:35 IST)
Photo Courtesy X
ಬೆಂಗಳೂರು: ಸದ್ಯ ರಾಜ್ಯದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಈ ವೇಳೆ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ನಡುವೆ ಹಾಸ್ಯಮಯ ಮಾತುಕತೆ ನಡೆದಿದೆ.

ವಿರೋಧ ಪಕ್ಷದ ನಾಯಕರ ಮುಖಗಳನ್ನು ಲೈವ್‌ನಲ್ಲಿ ತೋರಿಸಲಾಗುತ್ತಿಲ್ಲ, ಬರೀ ಸಚಿವರ ಮುಖಗಳನಷ್ಟೇ ತೋರಿಸಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೀಕರ್ ಯುಟಿ ಖಾದರ್ ಬಳಿ ದೂರು ಹೇಳುತ್ತಾರೆ.

ಇನ್ಮುಂದೆ ನಮ್ಮ ಮುಖಗಳು ಕೂಡಾ ಲೈವ್ ಟಿವಿನಲ್ಲಿ ಕಾಣಿಸಿಕೊಳ್ಳಬೇಕಾದರೆ ಸಚಿವ ಪ್ರಿಯಾಂಕಾ ಖರ್ಗೆ ಅಥವಾ ಆಡಳಿತ ಪಕ್ಷದ ಸಚಿವರ ಪಕ್ಕದಲ್ಲಿ ಕೂತುಕೊಳ್ಳ ಎಂದು ತಮಾಷೆ ಮಾಡುತ್ತಾರೆ.

ಅದಕ್ಕೆ ಸಚಿವ ಪ್ರಿಯಾಂಕಾ ಖರ್ಗೆ ಕೌಂಟರ್‌ ನೀಡಿ, ಎಲ್ಲಿ ನೀವು ದೂರು ನೀಡುತ್ತಿದ್ದೀರಿ. ಹಾಗೆಯೇ ಲೋಕಾಸಭೆಯಲ್ಲೂ ನಾವೂ ಕೂಡಾ ಇದೇ ರೀತಿಯ ಸಮಸ್ಯೆ ಅನುಭವಿಸುತ್ತಿದ್ದೇವೆ. ಲೋಕಸಭೆಯಲ್ಲೂ ವಿರೋಧ ಪಕ್ಷದ ನಾಯಕರ ಮುಖಗಳನ್ನು ತೋರಿಸುತ್ತಿಲ್ಲ ಎಂದು ಕೌಂಟರ್ ಕೊಡುತ್ತಾರೆ.

ವಿರೋಧ ಪಕ್ಷದ ದೂರನ್ನು ಸ್ವೀಕರಿಸಿದ ಸ್ಪೀಕರ್ ಯುಟಿ ಖಾದರ್‌ ಅವರು, ಈ ಬಗ್ಗೆ ಟೆಕ್ನಿಕಲ್ ಟೀಂ ಕರೆಸಿ ಸರಿ ಮಾಡುತ್ತೇವೆ. ಇದು ಸಮಯ ತೆಗೆದುಕೊಳ್ಳುತ್ತದೆ. ರಾಜಕಾರಣಿಗಳ ಪ್ರಚಾರ ಎಂಬುದು ಆಕ್ಸಿಜನ್ ಇದ್ದ ಹಾಗೇ. ನಿಮ್ಮ ಮೇಲಿನ ಕಾಳಜಿಯಿಂದ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments