Webdunia - Bharat's app for daily news and videos

Install App

Karnataka Assembly: ಈ ಬಾರಿ ಬಜೆಟ್ ವೇಳೆ ಸಿಎಂ ಸಿದ್ದರಾಮಯ್ಯ ನಿಂತು ಓದಲ್ಲ

Krishnaveni K
ಸೋಮವಾರ, 3 ಮಾರ್ಚ್ 2025 (09:03 IST)
ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಆದರೆ ಈ ಬಾರಿ ಸಿದ್ದರಾಮಯ್ಯ ನಿಂತು ಬಜೆಟ್ ಓದುವುದು ಅನುಮಾನವಾಗಿದೆ.

ಸಿಎಂ ಸಿದ್ದರಾಮಯ್ಯ ಕಳೆದ ಹಲವು ದಿನಗಳಿಂದ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಅವರು ಎಲ್ಲೇ ಹೋಗುವುದಿದ್ದರೂ ವೀಲ್ ಚೇರ್ ನಲ್ಲಿ ಓಡಾಡುತ್ತಿದ್ದಾರೆ. ಯಾವುದೇ ಸಭೆ, ಸಮಾರಂಭಗಳನ್ನೂ ವೀಲ್ ಚೇರ್ ನಲ್ಲಿ ಕುಳಿತೇ ಅಟೆಂಡ್ ಮಾಡುತ್ತಿದ್ದಾರೆ.

ಸದ್ಯಕ್ಕೆ ಅವರಿಗೆ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದು ಈ ಕಾರಣಕ್ಕೆ ಸಿಎಂ ಸಿದ್ದು ಎದ್ದು ಓಡಾಡುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಈ ಬಾರಿ ಅವರು ಕುಳಿತುಕೊಂಡೇ ಬಜೆಟ್ ಮಂಡನೆ ಮಾಡಲಿದ್ದಾರೆ ಎನ್ನುತ್ತಿವೆ ಮೂಲಗಳು.

ಬಜೆಟ್ ಭಾಷಣವೆಂದರೆ ಕನಿಷ್ಠ 1 ರಿಂದ 2 ಗಂಟೆಯಾದರೂ ನಿಲ್ಲಬೇಕಾಗುತ್ತದೆ. ಸದ್ಯದ ಮಟ್ಟಿಗೆ ಅವರಿಗೆ ಅಷ್ಟು ಹೊತ್ತು ನಿಲ್ಲಲು ಸಾಧ್ಯವಿಲ್ಲ. ಈ ಕಾರಣಕ್ಕೆ ಕುಳಿತು ಬಜೆಟ್ ಮಂಡಿಸಲಿದ್ದಾರೆ. ಒಟ್ಟಿನಲ್ಲಿ ಕುಳಿತಾದರೂ ಓದಿ, ನಿಂತಾದರೂ ಓದಿ ನಮಗೆ ಒಳ್ಳೆಯ ಬಜೆಟ್ ನೀಡಿ ಎನ್ನುವುದು ಜನಸಾಮಾನ್ಯರ ಬೇಡಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments