ಬಸ್ ಮುಷ್ಕರ: ಸರ್ಕಾರ, ಸಾರಿಗೆ ನೌಕರರ ನಡುವೆ ಸಂಕಟ ಸಾರ್ವಜನಿಕರಿಗೆ

Krishnaveni K
ಮಂಗಳವಾರ, 5 ಆಗಸ್ಟ್ 2025 (09:04 IST)
ಬೆಂಗಳೂರು: ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಮುಷ್ಕರದಿಂದಾಗಿ ಸಂಕಷ್ಟ ಅನುಭವಿಸುತ್ತಿರುವವರು ಮಾತ್ರ ಸಾರ್ವಜನಿಕರು. ಇಂದಿನಿಂದ ಕರ್ನಾಟಕದಲ್ಲಿ ನಾಲ್ಕೂ ನಿಗಮಗಳ ಬಸ್ ಮುಷ್ಕರ ಆರಂಭವಾಗಿದೆ. ಇದರಿಂದ ಬೆಳಿಗ್ಗೆಯೇ ಸಾರ್ವಜನಿಕರು ಪರದಾಡುತ್ತಿದ್ದಾರೆ.

ನಿನ್ನೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಸಾರಿಗೆ ನೌಕರರು ಇಂದಿನಿಂದ ಮುಷ್ಕರ ಆರಂಭಿಸಿದ್ದಾರೆ. ನೌಕರರ ರಜೆ ರದ್ದುಗೊಳಿಸಿ ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ತಾಕೀತು ಮಾಡಿದರೂ ಕ್ಯಾರೇ ಎಂದಿಲ್ಲ.

ಇಂದು ಬೆಳಿಗ್ಗೆಯಿಂದಲೇ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಬಸ್ ಗಳ ಓಡಾಟವಿಲ್ಲದೇ ಜನ ನಿಗದಿತ ಸ್ಥಳಕ್ಕೆ ತೆರಳಲು ಪರದಾಡುತ್ತಿದ್ದರು. ಬೆಳಿಗ್ಗೆ ಕೆಲಸಕ್ಕೆ ಹೋಗಲು ಬಸ್ ಗಳಿಲ್ಲದೇ ಜನ ಖಾಸಗಿ ವಾಹನಗಳನ್ನು ಆಶ್ರಯಿಸುವಂತಾಗಿದೆ.

ಕೆಲವರಿಗೆ ಬಸ್ ಮುಷ್ಕರವಿದೆ ಎಂಬ ಅರಿವೇ ಇಲ್ಲದೇ ದೂರದ ಊರುಗಳಿಂದ ಬಂದಿದ್ದಾರೆ. ಇದೀಗ ಹೋಗಬೇಕಾದ ಸ್ಥಳಕ್ಕೆ ಹೋಗಲು ಸಾಧ್ಯವಾಗದೇ ಬಸ್ ನಿಲ್ದಾಣದಲ್ಲೇ ದಿಕ್ಕು ಕಾಣದೇ ನಿಂತಿದ್ದಾರೆ. ಕೆಲವರಿಗೆ ತುರ್ತಾಗಿ ಹುಷಾರಿಲ್ಲದ ತಮ್ಮವರನ್ನು ನೋಡಲು ತೆರಳಬೇಕು. ಆದರೆ ಬಸ್ಸಿಲ್ಲದೇ ಸಂಕಷ್ಟ ಅನುಭವಿಸುತ್ತಿದ್ದಾರೆ.

ಸರ್ಕಾರಿ ಬಸ್ ಗಳ ಬದಲಾಗಿ ಇಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆಯನ್ನು ಪ್ರತೀ 6 ನಿಮಿಷಗಳಿಗೊಮ್ಮೆ ಸಂಚರಿಸುವಂತೆ ಹೆಚ್ಚುವರಿ ಸೇವೆ ನೀಡಲಾಗಿದೆ. ರಾಜ್ಯದ ಇತರೆ ಭಾಗಗಳಲ್ಲಿ ಖಾಸಗಿ ಬಸ್ ಗಳು ರೋಡ್ ಗಿಳಿದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

Karnataka Weather: ಇಂದು ಮಳೆ ಕಡಿಮೆ, ಆದರೆ ಹವಾಮಾನ ಎಚ್ಚರಿಕೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments