Webdunia - Bharat's app for daily news and videos

Install App

ದೆಹಲಿ ಚುನಾವಣೆ ಖರ್ಚಿಗೆ ಕರ್ನಾಟಕದಲ್ಲಿ ಬಸ್ ದರ ಏರಿಕೆ ಮಾಡಲಾಗಿದೆಯಾ

Krishnaveni K
ಶನಿವಾರ, 4 ಜನವರಿ 2025 (14:23 IST)
Photo Credit: X
ಬೆಂಗಳೂರು: ದೆಹಲಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಖರ್ಚು ವೆಚ್ಚ ನಿಭಾಯಿಸಲು ರಾಜ್ಯದಲ್ಲಿ ಬಸ್ ದರ ಏರಿಕೆ ಮಾಡಿ ಜನರಿಗೆ ಬರೆ ಹಾಕಲಾಗಿದೆಯೇ? ಹೀಗೆಂದು ಕರ್ನಾಟಕ ಬಿಜೆಪಿ ಆರೋಪಿಸಿದೆ.

ರಾಜ್ಯದಲ್ಲಿ ಇತ್ತೀಚೆಗೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15 ರಷ್ಟು ಹೆಚ್ಚು ಮಾಡಿತ್ತು. ಇದರ ಬಗ್ಗೆ ವಿಪಕ್ಷ ಬಿಜೆಪಿ ಮತ್ತು ಸಾರ್ವಜನಿಕರಿಂದ ಭಾರೀ ಆಕ್ರೋಶ ಕೇಳಿಬಂದಿದೆ.

ಈ ನಡುವೆ ಬಿಜೆಪಿ ಘಟಕ ಬಸ್ ದರ ಏರಿಕೆ ಬಗ್ಗೆ ಕಾಂಗ್ರೆಸ್ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಪರ ರಾಜ್ಯಗಳ ಚುನಾವಣೆ ಖರ್ಚಿಗಾಗಿ ಕನ್ನಡಿಗರ ಜೇಬಿಗೆ ಕನ್ನ ಹಾಕುವ ಸಂಪ್ರದಾಯವನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಮುಂದುವರಿಸಿದೆ. ಸಾರಿಗೆ ಸಂಸ್ಥೆ ಲಾಭದಲ್ಲಿದೆ ಎಂದು ಸುಳ್ಳು ಹೇಳಿ ಈಗ ಏಕಾಏಕಿ ಬಸ್ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಿಸಿರುವುದು ಸಹ ಮುಂಬರುವ ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ನ ಪಾರ್ಟಿ ಫಂಡ್ ಗೆ.

ಸಿಎಂ ಸಿದ್ದರಾಮಯ್ಯನವರೇ ಡಿಸಿಎಂ ಡಿಕೆ ಶಿವಕುಮಾರ್ ಅವರೇ ನಿಮ್ಮ ಸ್ವಾರ್ಥಕ್ಕಾಗಿ ಕನ್ನಡಿಗರಿಗೆ ಇನ್ನೆಷ್ಟು ತೊಂದರೆ ನೀಡುವಿರಿ? ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ದೆಹಲಿ ಚುನಾವಣೆಗೆ ಕನ್ನಡಿಗರ ಜೇಬಿಗೆ ಕತ್ತರಿ ಹಾಕಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments