Publish Date: Mon, 04 May 2026 (08:50 IST)
Updated Date: Mon, 04 May 2026 (08:53 IST)
ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆ ಜೊತೆ ಬಾಗಲಕೋಟೆ, ದಾವಣಗೆರೆಯಲ್ಲೂ ಉಪಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಇಲ್ಲಿ ಯಾರಿಗೆ ಮುನ್ನಡೆ ಇಲ್ಲಿದೆ ವಿವರ.
ಕರ್ನಾಟಕದ ಉಪಚುನಾವಣೆಗಳ ಪೈಕಿ ದಾವಣಗೆರೆ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಮುಸ್ಲಿಂ ಮತದಾರರ ಅಸಮಮಾಧಾನಕ್ಕೆ ಗುರಿಯಾಗಿತ್ತು. ತಮ್ಮ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ ಎಂದು ಮುಸ್ಲಿಂ ಸಮುದಾಯ ಅಸಮಾಧಾನಕ್ಕೀಡಾಗಿತ್ತು. ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸದ್ಯದ ಟ್ರೆಂಡ್ ಪ್ರಕಾರ ಇಲ್ಲಿ ಕಾಂಗ್ರೆಸ್ ನ ಸಮರ್ಥ್ ಸುಮಾರು 8 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಇನ್ನು, ಬಾಗಲಕೋಟೆಯಲ್ಲೂ ಬಿಜೆಪಿ ಹಿನ್ನಡೆಯಲ್ಲಿದೆ. ಇಲ್ಲಿ ಕಾಂಗ್ರೆಸ್ ನ ಉಮೇಶ್ ಮೇಟಿ ಸದ್ಯಕ್ಕೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎಚ್ ವೈ ಮೇಟಿ ಕುಟುಂಬಕ್ಕೇ ಮತ್ತೆ ಮತದಾರ ಮಣೆ ಹಾಕುವ ಲಕ್ಷಣ ಕಾಣುತ್ತಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ