Select Your Language

Notifications

webdunia
webdunia
webdunia
webdunia

ಉಪಚುನಾವಣೆ ನಾಮಪತ್ರ ಹಿಂಪಡೆಯಲು ಇಂದೇ ಕೊನೆ ದಿನ: ಕಾಂಗ್ರೆಸ್ ಗೆ ಈ ತಪ್ಪು ದುಬಾರಿಯಾಗುತ್ತಾ

Congress-BJP
ಬೆಂಗಳೂರು: ಕರ್ನಾಟಕದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ನಾಮಪತ್ರ ಹಿಂಪಡೆಯಲು ಇಂದು ಕೊನೇ ದಿನವಾಗಿದೆ. ಕಾಂಗ್ರೆಸ್ ಗೆ ಈ ತಪ್ಪು ದುಬಾರಿಯಾಗುತ್ತಾ?

ದಾವಣಗೆರೆಯಲ್ಲಿ ಶ್ಯಾಮನೂರು ಶಿವಶಂಕರಪ್ಪ ಮತ್ತು ಬಾಗಲಕೋಟೆಯಲ್ಲಿ ಎಚ್ ವೈ ಮೇಟಿ ನಿಧನದ ಬಳಿಕ ತೆರವಾಗಿದ್ದ ಅವರ ಸ್ಥಾನಕ್ಕೆ ಈಗ ಉಪಚುನಾವಣೆ ನಡೆಯುತ್ತಿದೆ. ಏಪ್ರಿಲ್ 10 ರಂದು ಚುನಾವಣೆ ನಡೆಯಲಿದ್ದು, ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಕಾಂಗ್ರೆಸ್ ನಿಂದ ದಾವಣಗೆರೆ ಕ್ಷೇತ್ರದಲ್ಲಿ ಶ್ಯಾಮನೂರು ಮೊಮ್ಮಗ ಸಮರ್ಥ್ ಶ್ಯಾಮನೂರು ಟಿಕೆಟ್ ಪಡೆದಿದ್ದಾರೆ. ಆದರೆ ಅವರಿಗೆ ಟಿಕೆಟ್ ಕೊಟ್ಟಿರುವುದು ಮುಸ್ಲಿಂ ಸಮುದಾಯದವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಈ ಕ್ಷೇತ್ರದಿಂದ ಮುಸ್ಲಿಂ ಸಮುದಾಯದ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್ ಪೈಲ್ವಾನ್ ಕಣಕ್ಕಿಳಿದಿದ್ದಾರೆ.

ಕಾಂಗ್ರೆಸ್ ನಾಯಕರು ಎಷ್ಟೇ ಮನವೊಲಿಸುವ ಪ್ರಯತ್ನ ನಡೆಸಿದರೂ ನಾಮಪತ್ರ ಹಿಂಪಡೆಯಲು ಬಿಲ್ ಕುಲ್ ಒಪ್ಪಿಲ್ಲ. ಇಲ್ಲಿ ಸುಮಾರು 80 ಸಾವಿರದಷ್ಟು ಮುಸ್ಲಿಂ ಮತದಾರರಿದ್ದಾರೆ. ಹೀಗಾಗಿ ಮುಸ್ಲಿಮರ ಮತಗಳು ನಿರ್ಣಾಯಕವಾಗಲಿದೆ. ಈಗ ಈ ಸಮುದಾಯದವರಿಗೆ ಟಿಕೆಟ್ ಕೊಡದಿರುವ ಕಾಂಗ್ರೆಸ್ ಗೆ ಮುಳುವಾಗುವ ಸಾಧ್ಯತೆಯಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಬರೆ: ಜಲಮಂಡಳಿಯಿಂದ ಶಾಕ್