Select Your Language

Notifications

webdunia
webdunia
webdunia
webdunia

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Siddaramaiah-DK Shivakumar

Krishnaveni K

ಬೆಂಗಳೂರು , ಮಂಗಳವಾರ, 10 ಜೂನ್ 2025 (16:26 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ ಸಚಿವ ಸಂಪುಟಕ್ಕೆ ಸರ್ಜರಿ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರೊಂದಿಗೆ ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡಲಿದ್ದು ಆ ಸಚಿವರು ಯಾರು ಇಲ್ಲಿದೆ ವಿವರ.

ರಾಜ್ಯದ ಕೆಲವು ಸಚಿವರು ಮಾತ್ರ ಸಕ್ರಿಯರಾಗಿ ಕೆಲಸ ಮಾಡುತ್ತಾರೆ. ಉಳಿದವರು ಸರ್ಕಾರದ ಪರವಾಗಿ ಮಾತನಾಡುವುದಿರಲಿ, ವಿಧಾನಸೌಧದ ಕಡೆಗೆ ತಲೆಯೂ ಹಾಕಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಕೆಲವು ಸಚಿವರು ಇಲ್ಲದ  ವಿವಾದಗಳನ್ನು ಮೈಮೇಲೆಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ಮಾಡಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.

ಅದರಂತೆ ಕೆಲವು ಸಚಿವರು ಸ್ಥಾನ ಕಳೆದುಕೊಳ್ಳಲಿದ್ದು, ಹಿರಿಯ ನಾಯಕರಾದ ಬಿಕೆ ಹರಿಪ್ರಸಾದ್, ಲಕ್ಷ್ಮಣ್ ಸವದಿ, ಬಿ ನಾಗೇಂದ್ರ, ನರೇಂದ್ರ ಸ್ವಾಮಿ, ಬಿಆರ್ ಪಾಟೀಲ್, ಕೆಎಂ ಶಿವಲಿಂಗೇಗೌಡ, ಎಂ ಕೃಷ್ಣಪ್ಪ, ಅಜಯ್ ಸಿಂಗ್, ತನ್ವೀರ್ ಸೇಠ್ ಮುಂತಾದವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.

ಯಾರಿಗೆಲ್ಲಾ ಗೇಟ್ ಪಾಸ್ ಸಾಧ್ಯತೆ?
ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ಪೌರಾಡಳಿತ ಸಚಿವ ರಹೀಂ ಖಾನ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್, ಪಶುಸಂಗೋಪನೆ ಸಚಿವ ಕೆ ವೆಂಕಟೇಶ್, ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್, ಸಾಂಖ್ಯಿಕ ಮತ್ತು ಯೋಜನೆ ಸಚಿವ ಡಿ ಸುಧಾಕರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯಿದೆ. ಇನ್ನು, ಇತ್ತೀಚೆಗಿನ ದಿನಗಳಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ತೀವ್ರ ಟೀಕೆ ಕೇಳಿಬರುತ್ತಿದೆ. ಈ ಹಿನ್ನಲೆಯ್ಲಿ ಗೃಹಸಚಿವ ಜಿ ಪರಮೇಶ್ವರ್ ಖಾತೆ ಬದಲಾವಣೆಯಾಗುವ ಸಾಧ್ಯತೆಯಿದೆ.



Share this Story:

Follow Webdunia kannada

ಮುಂದಿನ ಸುದ್ದಿ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ