ಇಂದು ನಾಮಪತ್ರ ಸಲ್ಲಿಸಲಿರುವ ಕರ್ನಾಟಕದ ಘಟಾನುಘಟಿ ನಾಯಕರು

Krishnaveni K
ಶುಕ್ರವಾರ, 12 ಏಪ್ರಿಲ್ 2024 (09:39 IST)
ಬೆಂಗಳೂರು: ಎರಡನೇ ಹಂತದ ನಾಮಪತ್ರ ಸಲ್ಲಿಕೆ ಕಾರ್ಯ ಇಂದು ಆರಂಭವಾಗಲಿದ್ದು, ಕರ್ನಾಟಕದ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಘಟಾನುಘಟಿ ನಾಯಕರಿಗೆ ಆಯಾ ಪಕ್ಷದ ನಾಯಕರು ಸಾಥ್ ನೀಡಲಿದ್ದಾರೆ. ನಾಮಪತ್ರ ಸಲ್ಲಿಕೆ ಎನ್ನುವುದು ಎಲ್ಲಾ ಪಕ್ಷಗಳಿಗೆ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿಕ್ಕಂತಾಗುತ್ತದೆ. ಹೀಗಾಗಿ ಎಲ್ಲಾ ಪಕ್ಷದ ನಾಯಕರೂ ಭರ್ಜರಿ ರೋಡ್ ಶೋ ಮೂಲಕವೇ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಕೆಎಸ್ ಈಶ್ವರಪ್ಪ ಇಂದು ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈಶ್ವರಪ್ಪಗೆ ಹಿಂದೂ ಸಂಘಟನೆಗಳು, ಸಮುದಾಯದ ನಾಯಕರು ಸಾಥ್ ನೀಡಲಿದ್ದಾರೆ. ಇನ್ನು, ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳು ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಬಿಜೆಪಿಯಿಂದ ಬಿ.ಶ್ರೀರಾಮುಲು ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅವರಿಗೆ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ. ಕಾಂಗ್ರೆಸ್ ನಿಂದ ಇ. ತುಕರಾಂ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಅವರಿಗೆ ಡಿಕೆ ಶಿವಕುಮಾರ್ ಸಾಥ್ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments