Webdunia - Bharat's app for daily news and videos

Install App

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Krishnaveni K
ಶನಿವಾರ, 19 ಏಪ್ರಿಲ್ 2025 (10:04 IST)
ನವದೆಹಲಿ: ಕರ್ನಾಟಕದಲ್ಲಿ ಈಗ ಜಾತಿಗಣತಿ ವರದಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ದೇಶದ ಪ್ರಮುಖ ನಾಯಕರ ಜಾತಿ ಯಾವುದು ಮತ್ತು ಯಾವ ಸಮುದಾಯಕ್ಕೆ ಸೇರಿದವರು ಎಂಬ ವಿವರ ನೋಡೋಣ.

ರಾಷ್ಟ್ರಪತಿ ದ್ರೌಪದಿ ಮುರ್ಮು: ಆದಿವಾಸಿ ಬುಡಕಟ್ಟು ಜನಾಂಗಕ್ಕೆ ಸೇರಿದ ದ್ರೌಪದಿ ಮುರ್ಮು ದೇಶದ ಉನ್ನತ ಸ್ಥಾನಕ್ಕೇರಿದ ಹೆಮ್ಮೆಯ ಮಹಿಳೆ.

ಪ್ರಧಾನಿ ನರೇಂದ್ರ ಮೋದಿ: ಗುಜರಾತ್ ನ ವಡ್ನಾನಗರ್ ನಲ್ಲಿ ಜನಿಸಿದ್ದ ಮೋದಿ ಹಿಂದೂ ಒಬಿಸಿ ಸಮುದಾಯಕ್ಕೆ ಸೇರಿದವರು. 2000 ರಲ್ಲಿ ಮೋದಿಯವರ ಜಾತಿ ವರ್ಗವನ್ನೂ ಹಿಂದುಳಿದ ವರ್ಗಕ್ಕೆ ಸೇರ್ಪಡೆಗೊಳಿಸಿತ್ತು.

ಅಮಿತ್ ಶಾ: ಗುಜರಾತ್ ನ ಹಿಂದೂ ಧರ್ಮದ ಬನಿಯಾ ಸಮುದಾಯದವರಾಗಿದ್ದಾರೆ. ಅಮಿತ್ ಶಾ ಪೂರ್ವಜರು ಗುಜರಾತ್ ನವರೇ. ಆದರೆ ಅವರು ಹುಟ್ಟಿದ್ದು ಮುಂಬೈನಲ್ಲಿ.

ನಿರ್ಮಲಾ ಸೀತಾರಾಮನ್: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮಿಳುನಾಡು ಮಧುರೈ ಮೂಲದ ಅಯ್ಯಂಗಾರ್ ಸಮುದಾಯದವರು.

ಮಲ್ಲಿಕಾರ್ಜುನ ಖರ್ಗೆ: ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ದಲಿತ ಸಮುದಾಯಕ್ಕೆ ಸೇರಿದವರು.

ರಾಹುಲ್ ಗಾಂಧಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ತಮ್ಮ ಜಾತಿ ಗುಟ್ಟು ಇದುವರೆಗೆ ಸ್ಪಷ್ಟವಾಗಿ ಬಿಟ್ಟುಕೊಟ್ಟಿಲ್ಲ. ಹಿಂದೊಮ್ಮೆ ತಾನು ಕಾಶ್ಮೀರಿ ಕೌಲ್ ಬ್ರಾಹ್ಮಣ ಎಂದಿದ್ದರು. ಮಗದೊಮ್ಮೆ ನನಗೆ ಯಾವುದೇ ಜಾತಿಯಿಲ್ಲ ಎಂದಿದ್ದರು.

ಸಿದ್ದರಾಮಯ್ಯ: ಸಿದ್ದರಾಮಯ್ಯನವರು ಕುರುಬ ಗೌಡ ಜನಾಂಗಕ್ಕೆ ಸೇರಿದವರು. ಅವರನ್ನು ಕುರುಬರ ನಾಯಕ ಎಂದೇ ಹೇಳಲಾಗುತ್ತದೆ.

ಡಿಕೆ ಶಿವಕುಮಾರ್: ಕರ್ನಾಟಕದ ಪ್ರಮುಖ ಸಮುದಾಯಗಳಲ್ಲಿ ಒಂದಾದ ಒಕ್ಕಲಿಗ ಸಮುದಾಯಕ್ಕೆ ಸೇರಿದವರು.

ಎಚ್ ಡಿ ಕುಮಾರಸ್ವಾಮಿ: ಕೇಂದ್ರ ಸಚಿವರಾಗಿರುವ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೂಡಾ ಒಕ್ಕಲಿಗ ಸಮುದಾಯಕ್ಕೆ ಸೇರಿದವರು.

ಬಿಎಸ್ ಯಡಿಯೂರಪ್ಪ: ಯಡಿಯೂರಪ್ಪ ಆಂಡ್ ಕುಟುಂಬ ರಾಜ್ಯದ ಮತ್ತೊಂದು ಪ್ರಮುಖ ಸಮುದಾಯವಾದ ಲಿಂಗಾಯತ ಸಮುದಾಯಕ್ಕೆ ಸೇರಿದವರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments