Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Krishnaveni K
ಗುರುವಾರ, 17 ಏಪ್ರಿಲ್ 2025 (08:37 IST)
ಬೆಂಗಳೂರು: ಇಂದು ರಾಜ್ಯ ಸಚಿವ ಸಂಪುಟದಲ್ಲಿ ಜಾತಿಗಣತಿ ವರದಿ ಜಾರಿ ಬಗ್ಗೆ ಮಹತ್ವದ ಚರ್ಚೆಯಾಗಲಿದೆ. ಈಗಾಗಲೇ ಸಮೀಕ್ಷಾ ವರದಿ ಬಗ್ಗೆ ವಿವಿಧ ಸಮುದಾಯಗಳಿಂದ ಅಪಸ್ವರವೆದ್ದಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಾಗಿ ರಾಜ್ಯದಲ್ಲಿ ಜಾತಿಗಣತಿ ಜಾರಿ ಸಾಧ್ಯವಿಲ್ಲ ಎಂಬ ಸೂಚನೆ ಸಿಕ್ಕಿದೆ.

ದೇಶದಾದ್ಯಂತ ಜಾತಿಗಣತಿಯಾಗಬೇಕು. ಎಲ್ಲಾ ಸಮುದಾಯಗಳಿಗೂ ದೇಶದ ಸಂಪತ್ತಿನ ಸಮಪಾಲು ಸಿಗಬೇಕು. ಇದಕ್ಕಾಗಿ ಜಾತಿಗಣತಿ ಅಗತ್ಯ ಎಂದು ರಾಹುಲ್ ಗಾಂಧಿ ಹೇಳುತ್ತಲೇ ಇದ್ದಾರೆ. ಈಗಾಗಲೇ ತೆಲಂಗಾಣದಲ್ಲಿ ಯಶಸ್ವಿಯಾಗಿ ಜಾತಿಗಣತಿ ಜಾರಿಗೆ ತಂದಿದ್ದೇವೆ ಎಂದಿದ್ದಾರೆ.

ಇದರ ಬೆನ್ನಲ್ಲೇ ಈಗ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲೂ ಜಾತಿಗಣತಿ ಜಾರಿ ಮಾಡಲು ಸರ್ಕಾರ ಮುಂದಾಗಿದೆ. ಆದರೆ ಯಾವಾಗ ಜಾತಿಗಣತಿ ವರದಿಗಳು ಸೋರಿಕೆಯಾದವೋ ಅಂದಿನಿಂದ ಎಲ್ಲಾ ಸಮುದಾಯಗಳೂ ಸಿಡಿದೆದ್ದಿವೆ. ಅದರಲ್ಲೂ ವಿಶೇಷವಾಗಿ ರಾಜ್ಯದ ಪ್ರಬಲ ಸಮುದಾಯಗಳಾದ ಲಿಂಗಾಯತ, ಒಕ್ಕಲಿಗ ಸಮುದಾಯವೇ ಜಾತಿಗಣತಿ ವರದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿವೆ. ರಂಭಾಪುರಶ್ರೀಗಳು ಈ ವರದಿ ಜಾರಿಯಾದರೆ ಸರ್ಕಾರ ಪತನವಾಗುತ್ತದೆ ಎಂದು ಎಚ್ಚರಿಕೆ ವಹಿಸಿದ್ದಾರೆ.

ಇನ್ನು ತಮ್ಮ ಸಮುದಾಯವನ್ನು ಎದುರು ಹಾಕಿಕೊಂಡು ಜಾತಿಗಣತಿ ಜಾರಿಗೆ ಒಪ್ಪಿಗೆ ಕೊಡಲು ಯಾವ ಶಾಸಕರೂ ಸಿದ್ಧರಿಲ್ಲ. ನಾಳೆ ದಿನ ತಮಗೆ ಮತ ಹಾಕಲು ಇದೇ ಸಮುದಾಯಗಳು ಬೇಕು. ಹೀಗಾಗಿ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ಅಂದುಕೊಂಡಷ್ಟು ಸುಲಭವಾಗಿ ಜಾತಿಗಣತಿ ವರದಿ ಜಾರಿ ಮಾಡಲು ಸಾಧ್ಯವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಮುಂದಿನ ಸುದ್ದಿ
Show comments