Webdunia - Bharat's app for daily news and videos

Install App

ಸಿಎಂ ಆದ ಕೂಡಲೇ ಬೊಮ್ಮಾಯಿ ಹಲವು ಯೋಜನೆ ಪ್ರಕಟ

Webdunia
ಬುಧವಾರ, 28 ಜುಲೈ 2021 (14:23 IST)
ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು 1000ದಿಂದ 1200ರೂ.ಗೆ ಏರಿಕೆ ಮಾಡಲಾಗಿದ್ದು, ಇದಕ್ಕಾಗಿ 862ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡಲಾಗುವುದು ಎಂದರು.
ವಿಧವಾ ವೇತನವನ್ನು 600ರಿಂದ 800 ರೂ.ಗೆ ಏರಿಕೆ ಮಾಡಲಾಗುವುದು.ಇದರಿಂದ 414 ಕೋಟಿ ರೂ. ಹೆಚ್ಚು ಮೀಸಲಿಡಬೇಕಾಗುತ್ತದೆ. ವಿಶೇಷ ಚೇತನ ಮಕ್ಕಳ ಶಿಷ್ಯ ವೇತನನ್ನು 600ರಿಂದ 800 ರೂ.ಗೆ ಏರಿಸಲಾಗುವುದು. ಇದರಿಂದ 3.66 ಲಕ್ಷ ವಿದ್ಯಾರ್ಥಿಗಳಿಗೆ ನೆರವಾಗಲಿದೆ. ಅಲ್ಲದೇ ರೈತ ಮಕ್ಕಳಿಗೆ ವಿದ್ಯಾರ್ಥಿ ವೇತನ ಶಿಷ್ಯ ವೇತನ ಸೇರಿದಂತೆ ಉನ್ನತ ಶಿಕ್ಷಣಕ್ಕಾಗಿ ಹೆಚ್ಚುವರಿಯಾಗಿ 1000 ಕೋಟಿ ರೂ. ಮೀಸಲಿಡಲಾಗುವುದು ಎಂದು ಅವರು ಹೇಳಿದರು.
ನಾಳೆಯಿಂದಲೇ ಪ್ರವಾಹ ಪೀಡಿತ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದು, ರಾಜ್ಯದ ಇತಿಹಾಸದಲ್ಲೇ ಛಾಪು ಮೂಡಿಸುವಂತಹ ಉತ್ತಮ ಆಡಳಿತ ನೀಡುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಪ್ರಧಾನಿಗಳ ಸಮಯ ನಿಗದಿಯಾದ ಕೂಡಲೇ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡುವುದಾಗಿ ಅವರು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments