Publish Date: Thu, 28 May 2026 (07:48 IST)
Updated Date: Thu, 28 May 2026 (07:51 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿದ್ದಾರೆ ಎಂಬ ವದಂತಿ ನಡುವೆ ಅದಕ್ಕೂ ಮೊದಲು ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಂಪುಟ ಸಹೋದ್ಯೋಗಿಗಳಿಗೆ ಅವರು ಉಪಾಹಾರ ಕೂಟ ಆಯೋಜಿಸಿದ್ದಾರೆ. ಇಂದು ಬೆಳಗ್ಗೆ 9ಗಂಟೆಗೆ ಉಪಹಾರವನ್ನು ಆಯೋಜನೆ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಕಕುತೂಹಲ ಮೂಡಿಸಿದೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ, ತಮ್ಮ ರಾಜೀನಾಮೆ ನಿಲುವಿಗೆ ಕಾರಣ ಹಾಗೂ ಹೈಕಮಾಂಡ್ ನಿರ್ಧಾರದ ಬಗ್ಗೆ ಸಿದ್ದರಾಮಯ್ಯ ಅವರು ಸಚಿವರಿಗೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಇನ್ನೂ ಮುಖ್ಯಮಂತ್ರಿ ಸಚಿವಾಲಯದಿಂದಲೂ ಮಧ್ಯಾಹ್ನ ರಾಜ್ಯಪಾಲರ ಭೇಟಿಗೆ ಲೋಕಭವನಕ್ಕೆ ತೆರಳಲು ಸಿದ್ದರಾಮಯ್ಯ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರು ಬುಧವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾಳೆ (ಗುರುವಾರ) ಎಲ್ಲವನ್ನೂ ಮಾತನಾಡುತ್ತೇನೆ ಎಂದಷ್ಟೆ ಹೇಳಿದ್ದರು.
ಅದರಂತೆ ಇಂದು ಸಿದ್ದರಾಮಯ್ಯ ನಡೆ ಬಗ್ಗೆ ಬಾರೀ ಕುತೂಹಲ ಮೂಡಿಸಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ