ಕರ್ನಾಟಕ ಕರಾವಳಿ, ಮಲೆನಾಡಿನಲ್ಲಿ ಇನ್ನೆಷ್ಟು ದಿನ ಮುಂದುವರಿಯಲಿದೆ ಮಳೆ

Krishnaveni K
ಶನಿವಾರ, 20 ಜುಲೈ 2024 (09:32 IST)
ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಈಗಾಗಲೇ ನೆರೆ ಸದೃಶ ವಾತಾವರಣವುಂಟಾಗಿದೆ. ಹಲವೆಡೆ ಭೂ ಕುಸಿತ, ರಸ್ತೆ ಬಂದ್ ಆಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಸತತ ಮಳೆಯಿಂದ ಕರಾವಳಿ, ಮಲೆನಾಡಿನ ಜನ ಈಗ ಬೇಸತ್ತಿದ್ದಾರೆ. ಅತ್ತ ಮನೆಯಲ್ಲಿ ಕೂರಲೂ ಆಗದೇ ಹೊರಗಡೆ ಓಡಾಡಲೂ ಆಗದ ಪರಿಸ್ಥಿತಿಯಾಗಿದೆ. ಈ ನಡುವೆ ಹವಾಮಾನ ಇಲಾಖೆ ಲೇಟೆಸ್ಟ್ ವರದಿ ಪ್ರಕಾರ ಮಳೆ ಮತ್ತಷ್ಟು ಮುಂದುವರಿಯಲಿದೆ ಎನ್ನಲಾಗಿದೆ.

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಜುಲೈ 24 ರವರೆಗೆ ಮಳೆ ಅಬ್ಬರ ಮುಂದುವರಿಯಲಿದೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಮಳೆ ಕೊಂಚ ತಗ್ಗಿದ್ದರೂ ಮತ್ತೆ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಹಾಗಿದೆ. ಜುಲೈ 24 ರವರೆಗೆ ಮಳೆಯ ಅಬ್ಬರವಿರಲಿದ್ದು, ಕ್ರಮೇಣ ಕೊಂಚ ಮಳೆ ಕಡಿಮೆಯಾಗಬಹುದು ಎಂದು ಹವಾಮಾನ ವರದಿ ತಿಳಿಸಿದೆ.

ಕೇವಲ ಕರಾವಳಿ ಮಾತ್ರವಲ್ಲದೆ, ಮೈಸೂರು, ಮಂಡ್ಯ, ಹಾಸನ ಮುಂತಾದೆಡೆಯೂ ಉತ್ತಮ ಮಳೆಯಾಗುತ್ತಿದೆ. ಈಗಾಗಲೇ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗುತ್ತಿವೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ಇಂದೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಬೆಳಗಾವಿಯಲ್ಲಿ ಆರೆಂಜ್ ಅಲರ್ಟ್, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ನಿನ್ನೆಯಿಡೀ ಮಳೆಯಾಗಿದ್ದು, ಇಂದೂ ಮೋಡ ಕವಿದ ವಾತಾವರಣವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments