Select Your Language

Notifications

webdunia
webdunia
webdunia
webdunia

ರಾಜ್ಯ ಕಾಂಗ್ರೆಸ್ ಇಮೇಜ್ ಹಾಳಾಗುತ್ತಿರುವ ಚಿಂತೆ

ರಾಜ್ಯ ಕಾಂಗ್ರೆಸ್ ಇಮೇಜ್ ಹಾಳಾಗುತ್ತಿರುವ ಚಿಂತೆ
ಬೆಂಗಳೂರು , ಶುಕ್ರವಾರ, 20 ಅಕ್ಟೋಬರ್ 2023 (10:42 IST)
ಬೆಂಗಳೂರು: ನುಡಿದಂತೆ ನಡೆದಿದ್ದೇವೆ ಎಂಬ ಘೋಷಣೆಯೊಂದಿಗೆ ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಈಗ ಇಮೇಜ್ ಗೆ ಧಕ್ಕೆ ಬರುತ್ತಿರುವ ಚಿಂತೆ ಶುರುವಾಗಿದೆ.

ಇತ್ತೀಚೆಗೆ ಗುತ್ತಿಗೆದಾರರ ಮೇಲಿನ ಐಟಿ ದಾಳಿಯಲ್ಲಿ ಸಿಕ್ಕ ಕಂತೆ ಕಂತೆ ಹಣಕ್ಕೆ ಕಾಂಗ್ರೆಸ್ ಲಿಂಕ್ ಇದೆ ಎಂಬ ಆರೋಪ ಕೇಳಿಬಂದಿತ್ತು. ಅದರ ಬೆನ್ನಲ್ಲೇ ವರ್ಗಾವಣೆ ದಂದೆ ಆರೋಪ, ಶಾಸಕರಿಗೆ ಅನುದಾನ ಸಿಗುತ್ತಿಲ್ಲವೆಂಬ ಆರೋಪಗಳಿಂದಾಗಿ ಕಾಂಗ್ರೆಸ್ ಗೆ ಮುಖಭಂಗವಾಗಿದೆ.

ಹೀಗಾಗಿ ಈಗ ಮುಂದಿನ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗದಂತೆ ಕಾಪಾಡಿಕೊಳ್ಳಬೇಕು. ಇಲ್ಲದೇ ಹೋದರೆ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಇದರ ಲಾಭ ಪಡೆಯಬಹುದು ಎಂದು ಕಾಂಗ್ರೆಸ್ ಶಾಸಕರು ಸಿಎಂ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಮಾಸ್ ಉಗ್ರರಿಗೆ ಕಾಫಿ ಕೊಟ್ಟು ಯಾಮಾರಿಸಿದ ಇಸ್ರೇಲಿ ಮಹಿಳೆ!