ಇಂದು ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಖರ್ಗೆ ಅಳಿಯ, ಸಚಿವರ ಪುತ್ರರು

Krishnaveni K
ಬುಧವಾರ, 20 ಮಾರ್ಚ್ 2024 (10:56 IST)
Photo Courtesy: Twitter
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಇಂದು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸುತ್ತಿದೆ.  ಈ ಪಟ್ಟಿಯಲ್ಲಿ ಶಾಸಕರು, ಸಚಿವರ ಮಕ್ಕಳಿಗೆ ಸ್ಥಾನ ಸಿಕ್ಕಿದೆ ಎನ್ನಲಾಗಿದೆ.

ನಿನ್ನೆ ದೆಹಲಿಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಿ ಕಾಂಗ್ರೆಸ್ ಎರಡನೇ ಪಟ್ಟಿ ಅಂತಿಮಗೊಳಿಸಿದ್ದಾರೆ. ಈ ಪಟ್ಟಿಯಲ್ಲಿ 17 ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಾಗಿದೆ. ಇನ್ನುಳಿದ ನಾಲ್ಕು ಅಭ್ಯರ್ಥಿಗಳ ಆಯ್ಕೆ ಇನ್ನೂ ಬಾಕಿಯಿದೆ.

ಇದೀಗ ಮೈಸೂರು, ಚಿಕ್ಕಮಗಳೂರು, ಕಲಬುರಗಿ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಈ ಪೈಕಿ ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಳಿಯ, ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರಿ, ಬೆಂಗಳೂರು ದಕ್ಷಿಣಕ್ಕೆ ರಾಮಲಿಂಗಾ ರೆಡ್ಡಿ ಪುತ್ರಿ ಸ್ಪರ್ಧಿಸುವುದು ಬಹುತೇಕ ಪಕ್ಕಾ ಎನ್ನಲಾಗಿದೆ.

ಇದೀಗ ಬೆಂಗಳೂರು ಉತ್ತರ, ಉತ್ತರ ಕನ್ನಡ, ಹುಬ್ಬಳ್ಳಿ-ಧಾರವಾಡ, ಬಳ್ಳಾರಿ ಕ್ಷೇತ್ರದ ಟಿಕೆಟ್ ಫೈನಲ್ ಆಗಬೇಕಿದೆ. ಇಂದು ಎರಡನೇ ಪಟ್ಟಿಯನ್ನು ಘೋಷಣೆ ಮಾಡುತ್ತಿರುವುದಾಗಿ ಸ್ವತಃ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕೆ ಮೊದಲು ಕರ್ನಾಟಕ 7 ಕ್ಷೇತ್ರಗಳಿಗೆ ಸ್ಪರ್ಧಿಗಳ ಹೆಸರು ಘೋಷಣೆ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments