ರಾಜ್ಯದಲ್ಲಿ ಈ ವರ್ಷ ನಡೆದ ಸಾಲು ಸಾಲು ಸಾವು ನೋವುಗಳು!

Webdunia
ಶುಕ್ರವಾರ, 22 ಡಿಸೆಂಬರ್ 2017 (09:25 IST)
ಬೆಂಗಳೂರು: 2017 ಕರ್ನಾಟಕದ ಪಾಲಿಗೆ ಬೇಡದ ಕಾರಣಗಳಿಗೆ ಸುದ್ದಿಯಾದ ವರ್ಷ. ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗಳು, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಇತ್ಯಾದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಘಟನೆಗಳು.
 

ಹಾಗೆ ನೋಡಿದರೆ ಈ ವರ್ಷ ಮಂಗಳೂರು, ಕರಾವಳಿ ಭಾಗದಲ್ಲಿ ಹೆಚ್ಚು ಕೋಮು ಗಲಭೆಗಳಾದವು. ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಮಂಗಳೂರು, ಬಂಟ್ವಾಳದಲ್ಲಿ ದೊಡ್ಡ ಮಟ್ಟಿನ ಪ್ರತಿಭಟನೆಗಳಾದವು. ಇತ್ತೀಚೆಗೆ ಪರೇಶ್ ಮೇಸ್ತ ಸಾವಿಗೀಡಾದಾಗ ಉತ್ತರ ಕರ್ನಾಟಕ ಪ್ರಕ್ಷುಬ್ಧವಾಗಿತ್ತು.

ಸೆಪ್ಟೆಂಬರ್ 5 ರಂದು ಪತ್ರಕರ್ತೆ ಗೌರಿ ಲಂಕೇಶ್ ರನ್ನು ಅವರ ಮನೆ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದರು. ಆ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಇದರ ನಡುವೆ ಸುನಿಲ್ ಹೆಗ್ಗರವಳ್ಳೆ ಕೊಲೆ ಸುಪಾರಿ ಪ್ರಕರಣದಲ್ಲಿ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಬಂಧನವಾಗಿದೆ.

ಇದಲ್ಲದೆ, ಖಾಸಗಿ ವೈದ್ಯಕೀಯ ಮಸೂದೆ ಮಂಡಿಸಲು ಹೊರಟ ರಾಜ್ಯ ಸರ್ಕಾರದ ತೀರ್ಮಾನದ ವಿರುದ್ಧ ಖಾಸಗಿ ವೈದ್ಯರು ಧರಣಿ ನಡೆಸಿದ ಪರಿಣಾಮ ಸುಮಾರು 50 ಮಂದಿ ಪ್ರಾಣ ತೆರಬೇಕಾಯಿತು.

ಇದು ಸಾಲದೆಂಬಂತೆ ದುರ್ಘಟನೆಗಳಲ್ಲಿ ಸಾವನ್ನಪ್ಪಿದವರು ಇನ್ನಷ್ಟು ಮಂದಿ. ಬೆಳಗಾವಿಯಲ್ಲಿ  ಏಪ್ರಿಲ್ ತಿಂಗಳಲ್ಲಿ ಕೊಳವೆ ಬಾವಿಗೆ ಬಿದ್ದು ಕಾವೇರಿ ಎನ್ನುವ ಪುಟ್ಟ ಬಾಲಕಿ ಪ್ರಾಣ ಬಿಟ್ಟಿದ್ದಳು. ಈಕೆಗಾಗಿ ಇಡೀ ರಾಜ್ಯವೇ ಬದುಕಿ ಬರಲೆಂದು ಪ್ರಾರ್ಥಿಸಿದರೂ ಪ್ರಯೋಜನವಾಗಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಚಿತ್ರದುರ್ಗಾದ ಪ್ರತಿಷ್ಠಿತ ಶಾಲೆಯ ಶಿಕ್ಷಕನ ದುಷ್ಕೃತ್ಯ ಬಯಲು

ಇರಾನ್‌ನಲ್ಲಿನ ಬೆಳವಣಿಗೆಗಳ ನಂತರ ಇಂಡಿಗೋ ವಿಮಾನ ರದ್ದು

ಕರಾವಳಿ ಭಾಗದ ಎಲ್ಲರ ನೆಚ್ಚಿನ ಜೈವಿಕ ಉದ್ಯಾನವನಕ್ಕೆ ಎಂಥಾ ಸ್ಥಿತಿ

ಪೌರ ಕಾರ್ಮಿಕೆಯ ಪ್ರಾಮಾಣಿಕತೆಗೆ ಮನೆಗೆ ಕರೆಸಿ ಚಿನ್ನದ ಸರ ನೀಡಿದ ರಜನಿಕಾಂತ್

ಮುಂದಿನ ಸುದ್ದಿ
Show comments