Webdunia - Bharat's app for daily news and videos

Install App

ಡಿಸಿಎಂ ಫೈಟ್ ಸೃಷ್ಟಿಸಿ ಡಿಕೆ ಶಿವಕುಮಾರ್ ಕಿತ್ತು ಹಾಕಲು ಕಾಂಗ್ರೆಸ್ ನೊಳಗೇ ಮಸಲತ್ತು

Krishnaveni K
ಬುಧವಾರ, 26 ಜೂನ್ 2024 (10:49 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿಸಿದಷ್ಟು ಸ್ಥಾನ ಪಡೆಯಲು ವಿಫಲವಾದ ಮೇಲೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು ಎಂಬ ಕೂಗು ಕೇಳಿಬಂದಿತ್ತು. ಆದರೆ ಇದುವರೆಗೆ ಅದಕ್ಕೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಕ್ಕಿರಲಿಲ್ಲ.

ಇದೀಗ ರಾಜ್ಯ ಸರ್ಕಾರದಲ್ಲಿ ಡಿಸಿಎಂ ಫೈಟ್ ಜೋರಾಗಿದೆ. ಒಂದಕ್ಕಿಂತ ಹೆಚ್ಚು ಸಮುದಾಯವಾರು ನಾಯಕರಿಗೆ ಡಿಸಿಎಂ ಪಟ್ಟ ನೀಡಬೇಕು ಎಂದು ಆಗ್ರಹಗಳು ಜೋರಾಗಿವೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ. ಆದರೆ ಇದೆಲ್ಲದರ ಹಿಂದೆ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕಿತ್ತೊಗೆಯುವ ಪ್ಲ್ಯಾನ್ ಇದೆ ಎನ್ನಲಾಗುತ್ತಿದೆ.

ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ ಗೆ ಕಡಿವಾಣ ಹಾಕಲು ಮತ್ತಷ್ಟು ಡಿಸಿಎಂ ಹುದ್ದೆ ಸೃಷ್ಟಿಸಲು ಒಳಗೊಳಗೇ ಕಾಂಗ್ರೆಸ್ ನಾಯಕರಿಂದ ಮಸಲತ್ತು ನಡೆಯುತ್ತಿದೆ. ಒಂದು ವೇಳೆ ಡಿಸಿಎಂ ಹುದ್ದೆ ಸೃಷ್ಟಿಸಲು ನಿರಾಕರಿಸಿದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆಯಿಡಲು ಯೋಜನೆ ರೂಪಿಸಲಾಗಿದೆ.

ಈ ಮೂಲಕ ಡಿಕೆ ಶಿವಕುಮಾರ್ ಪ್ರಭಾವ ತಗ್ಗಿಸಲು ಪ್ಲ್ಯಾನ್ ಮಾಡಲಾಗಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಬಳಿಕ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಕೆಶಿಯನ್ನು ಕಟ್ಟಿ ಹಾಕಲು ಪಕ್ಷದೊಳಗೇ ಅವರ ವಿರೋಧಿ ಬಣ ಹೀಗೊಂದು ಪ್ಲ್ಯಾನ್ ಮಾಡಿದೆಯಂತೆ .ಅದಕ್ಕಾಗಿಯೇ ಈಗ ದಿಡೀರ್ ಆಗಿ ಡಿಸಿಎಂ ಪಟ್ಟದ ಫೈಟ್ ಶುರುವಾಗಿದೆ ಎಂಬ ಗುಸು ಗುಸು ಹರಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments