ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕೃಪಾಂಕದಲ್ಲಿ ಹೊಸ ಬದಲಾವಣೆ ಇಲ್ಲಿ ಗಮನಿಸಿ

Krishnaveni K
ಬುಧವಾರ, 9 ಅಕ್ಟೋಬರ್ 2024 (14:10 IST)
ಬೆಂಗಳೂರು: ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವ ಪದ್ಧತಿಯನ್ನು ಕೈಬಿಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಶೇ20 ರಷ್ಟು ಕೃಪಾಂಕ ನೀಡಲಾಗಿತ್ತು. ಇದರ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಯಾರನ್ನು ಕೇಳಿ ಈ ರೀತಿ ಕೃಪಾಂಕ ನೀಡಲಾಗಿದೆ ಎಂದು ಗರಂ ಆಗಿ ಪ್ರಶ್ನೆ ಮಾಡಿದ್ದರು. ಇದರ ಬೆನ್ನಲ್ಲೇ ಈ ವರ್ಷದಿಂದ ಕೃಪಾಂಕಕ್ಕೆ ಬ್ರೇಕ್ ಹಾಕಲಾಗಿದೆ.
  
ಕೃಪಾಂಕ ನೀಡಿಯೂ ಈ ವರ್ಷ ಶೇ.10 ರಷ್ಟು ಕಡಿಮೆ ಫಲಿತಾಂಶ ಬಂದಿತ್ತು. ಹೀಗಾಗಿ ಈ ವರ್ಷ ಕೃಪಾಂಕ ನೀಡದೇ ಇರಲು ತೀರ್ಮಾನಿಸಲಾಗಿದೆ. ಮುಂದಿನ ವರ್ಷದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ ಹಿನ್ನಲೆಯಲ್ಲಿ ಕೃಪಾಂಕ ರದ್ದುಗೊಳಿಸಿ ಶಿಕ್ಷಣ ಸಚಿವರು ಆದೇಶ ನೀಡಿದ್ದಾರೆ.

ಕೃಪಾಂಕ ನೀಡಿದ್ದರಿಂದ ಹಲವು ವಿದ್ಯಾರ್ಥಿಗಳು ಫೇಲ್ ಆಗುವುದರಿಂದ ತಪ್ಪಿಸಿಕೊಂಡಿದ್ದಾರೆ. ಈ ಹಿಂದೆ ಕೊವಿಡ್ ಕಾರಣದಿಂದ ಕೃಪಾಂಕ ನೀಡಲಾಗುತ್ತಿತ್ತು. ಆದರೆ ಈಗ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದು ಈಗ ಕೃಪಾಂಕ ನೀಡುವ ಅಗತ್ಯವೇನಿದೆ ಎಂಬ ಪ್ರಶ್ನೆಗಳು ಬಂದಿತ್ತು. ಈ ಹಿನ್ನಲೆಯಲ್ಲಿ ಬದಲಾವಣೆ ತರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments