Select Your Language

Notifications

webdunia
webdunia
webdunia
webdunia

ಸಿನಿ ಸ್ಟಾರ್ ಪ್ರಚಾರ ಮಾಡಿದ್ದ ಕ್ಷೇತ್ರಗಳ ಪಾಡೇನು?

ಸ್ಯಾಂಡಲ್ ವುಡ್
ಬೆಂಗಳೂರು , ಶನಿವಾರ, 13 ಮೇ 2023 (09:50 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಈ ಬಾರಿ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಪ್ರಚಾರ ನಡೆಸಿದ್ದರು.
 

ಕಾಂಗ್ರೆಸ್, ಬಿಜೆಪಿ ಪರ ಘಟಾನುಘಟಿ ತಾರೆಯರೇ ಕಣಕ್ಕಿಳಿದು ಪ್ರಚಾರ ನಡೆಸಿದ್ದರು. ಅದರಲ್ಲೂ ಬಿಜೆಪಿ ಪರ ಕಿಚ್ಚ ಸುದೀಪ್, ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ ನಡೆಸಿದ್ದರು.

ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿವರ ಶಿಗ್ಗಾಂವ್ ಸೇರಿದಂತೆ ಬಿಜೆಪಿಯ ಪ್ರಮುಖ ಅಭ್ಯರ್ಥಿಗಳ ಪರವಾಗಿ ವಿವಿದೆಡೆ ಪ್ರಚಾರ ನಡೆಸಿದ್ದರು. ಇದೀಗ ಸಿಎಂ ಬೊಮ್ಮಾಯಿ ಶಿಗ್ಗಾಂವ್ ನಲ್ಲಿ ಮುನ್ನಡೆಯಲ್ಲಿದ್ದಾರೆ.

ಶಿವರಾಜ್ ಕುಮಾರ್ ತಮ್ಮ ಬಾವ ಮಧು ಬಂಗಾರಪ್ಪ ಪರ ಸೊರಬದಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ್ದರು. ಇಲ್ಲಿ ಮಧು ಮುನ್ನಡೆಯಲ್ಲಿದ್ದಾರೆ. ಇನ್ನು, ವರುಣಾದಲ್ಲಿ ಸಿದ್ದರಾಮಯ್ಯ ಪರ ನಿಶ್ವಿಕಾ ನಾಯ್ಡು, ದುನಿಯಾ ವಿಜಯ್, ರಮ್ಯಾ ಸೇರಿದಂತೆ ಘಟಾನುಘಟಿಗಳು ಪ್ರಚಾರ ನಡೆಸಿದ್ದರು. ಇಲ್ಲಿ ಸಿದ್ದರಾಮಯ್ಯ ಮುನ್ನಡೆಯಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾಮರಾಜನಗರದಲ್ಲಿ ವಿ.ಸೋಮಣ್ಣ ಹಿನ್ನಡೆ