ಗ್ಯಾರಂಟಿ ಯೋಜನೆಗಾಗಿ ವಿಕಲಚೇತನರ ಅನುದಾನ ಡಮಾರ್: ರಾಜ್ಯ ಸರ್ಕಾರದ ವಿರುದ್ಧ ಆರೋಪ

Krishnaveni K
ಶನಿವಾರ, 30 ನವೆಂಬರ್ 2024 (09:50 IST)
ಬೆಂಗಳೂರು: ಕರ್ನಾಟಕದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ಹಲವು ಯೋಜನೆಗಳ ಅನುದಾನಕ್ಕೆ ಕತ್ತರಿ ಹಾಕಿದೆ ಎಂಬ ಆರೋಪಗಳ ಮಧ್ಯೆಯೇ ವಿಕಲಚೇತನರ ಅನುದಾನವನ್ನೂ ಕಡಿತ ಮಾಡಿರುವ ಆರೋಪ ಕೇಳಿಬಂದಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಅದನ್ನು ಪೂರೈಸಲು ಹಣಕಾಸಿನ ಬವಣೆ ಎದುರಿಸುತ್ತಿದೆ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆಯೂ ಇಲ್ಲ, ಮುಂದುವರಿಸಬೇಕಾದರೆ ಇತರೆ ಯೋಜನೆಗಳ ಅನುದಾನಕ್ಕೆ ಕತ್ತರಿ ಹಾಕುವುದು ಅನಿವಾರ್ಯ ಎಂಬ ಪರಿಸ್ಥಿತಿಯಾಗಿದೆ.

ಇದೀಗ ವಿಕಲಾಂಗರಿಗೆ ನೀಡಲಾಗುವ ಅನುದಾನದಲ್ಲಿ ಶೇ.80 ರಷ್ಟು ಕಡಿತ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿಕಲಚೇತನ ಫೆಡರೇಷನ್ ಆಕ್ರೋಶ ಹೊರಹಾಕಿದೆ. ನಮ್ಮ ಯೋಜನೆಗಳಿಗೆ ನೀಡಬೇಕಾಗಿರುವ ಅನುದಾನದಲ್ಲಿ ಶೇ.80 ರಷ್ಟು ಕಡಿತ ಮಾಡಲಾಗಿದೆ. ಯಾವುದೇ ಯೋಜನೆಗಳು ಸುಗಮವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದೆ.

ಈಗಾಗಲೇ ಸರ್ಕಾರಕ್ಕೆ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಮನವಿಗೆ ಸ್ಪಂದಿಸದೇ ಇದ್ದರೆ ಡಿಸೆಂಬರ್ ನಿಂದ ಪ್ರತಿಭಟನೆ ನಡೆಸಲು ಫೆಡರೇಷನ್ ತೀರ್ಮಾನಿಸಿದೆ. ವಿಕಲಚೇತನರಿಗೆ ನೀಡಲಾಗುವ ಹೊಲಿಗೆ ಯಂತ್ರ, ಬ್ರೈಲ್ ಕಿಟ್, ಬ್ಯಾಟರಿ ಆಪರೇಟೆಡ್ ವೀಲ್ ಚೇರ್, ಯಂತ್ರ ಚಾಲಿತ ದ್ವಿಚಕ್ರವಾಹನ ಸೇರಿದಂತೆ ಹಲವು ಸೌಲಭ್ಯಗಳಿಗೆ ನೀಡಲಾಗುವ ಅನುದಾನಕ್ಕೆ ಕತ್ತರಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments