Webdunia - Bharat's app for daily news and videos

Install App

ಮಾರಣಾಂತಿಕ ರೋಗಗಳಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು ನೀಡಿ ಮಹತ್ವದ ಆದೇಶ

Krishnaveni K
ಶುಕ್ರವಾರ, 31 ಜನವರಿ 2025 (15:42 IST)
ಬೆಂಗಳೂರು: ಮಾರಣಾಂತಿಕ ರೋಗಗಳಿಂದ ಬಳಲುತ್ತಿರುವವರಿಗೆ ದಯಾಮರಣ ಹೊಂದಲು ಅವಕಾಶ ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಆದೇಶ ನೀಡಿದೆ.

ಮಾರಣಾಂತಿಕ ರೋಗಗಳಿಂದ ಬಳಲುತ್ತಿದ್ದು ಜೀವನಪೂರ್ತಿ ಚೇತರಿಕೆಗೆ ಅವಕಾಶವೇ ಇಲ್ಲದ ರೋಗಿಗಳಿಗೆ ದಯಾಮರಣ ಹೊಂದಲು ಅವಕಾಶ ಕಲ್ಪಿಸಲಾಗಿದೆ. ದಯಾಮರಣಕ್ಕೆ ಒಪ್ಪಿಗೆ ನೀಡಲು ಇಬ್ಬರು ವೈದ್ಯರನ್ನೊಳಗೊಂಡ ಸಮಿತಿಯನ್ನು ನಿಯೋಜಿಸಲಾಗುತ್ತದೆ.

ಈ ಮೂಲಕ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ನಿರ್ದೇಶನವನ್ನು ಪಾಲಿಸಿದೆ.  ಇತ್ತೀಚೆಗಿನ ದಿನಗಳಲ್ಲಿ ಮಾರಣಾಂತಿಕ ರೋಗಗಳಿಂದ ಬಳಲುತ್ತಿರುವವರು ದಯಾ ಮರಣಕ್ಕೆ ಮನವಿ ಸಲ್ಲಿಸುತ್ತಿರುವ ಸಂಖ್ಯೆ ಹೆಚ್ಚಾಗಿರುವ ಕಾರಣಕ್ಕೆ ಈ ಮಹತ್ವದ ಆದೇಶ ಹೊರಡಿಸಲಾಗಿದೆ.

ಮೊದಲು ರೋಗಿಯ ಕುಟುಂಬಸ್ಥರು ಮನವಿ ಮಾಡಬೇಕಾಗುತ್ತದೆ. ಇದನ್ನು ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ನಂತರ ಸೆಕೆಂಡರಿ ಬೋರ್ಡ್ ಗೆ ಮನವಿಯನ್ನು ಹಸ್ತಾಂತರಿಸುತ್ತದೆ. ಎಲ್ಲಾ ವರದಿಗಳನ್ನು ಪರಿಶೀಲಿಸಿ ಈ ಬೋರ್ಡ್ ಕೋರ್ಟ್ ಗೆ ಮನವಿ ಸಲ್ಲಿಸುತ್ತದೆ. ಕೋರ್ಟ್ ಅನುಮತಿ ನೀಡಿದರೆ ರೋಗಿಯ ಜೀವ ರಕ್ಷಕವನ್ನು ತೆಗೆಯಲು ಅವಕಾಶ ನೀಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments