ಗ್ಯಾರಂಟಿ ಪರಿಷ್ಕರಣೆಗೆ ಬಿಪಿಎಲ್ ಕಾರ್ಡ್ ಗೆ ಹೊಸ ನಿಯಮದಿಂದ ಬಡವರಿಗೆ ಸಂಕಷ್ಟ

Krishnaveni K
ಬುಧವಾರ, 28 ಆಗಸ್ಟ್ 2024 (11:10 IST)
ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್ ಗಳಿಗೆ ಕತ್ತರಿ ಹಾಕಿ ಗ್ಯಾರಂಟಿ ಯೋಜನೆ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ ಈಗ ಕೆಲವು ಬಡವರೇ ಸಮಸ್ಯೆಯಾಗುತ್ತಿದೆ.

ಬಿಪಿಎಲ್ ಕಾರ್ಡ್ ಪರಿಷ್ಕರಣೆಯಲ್ಲಿ 12 ಲಕ್ಷ ಕಾರ್ಡ್ ಗಳನ್ನು ಅನರ್ಹಗೊಳಿಸಲು ಸಿದ್ಧತೆ ನಡೆದಿದೆ. ಆದರೆ ಸರ್ಕಾರದ ಹೊಸ ನಿಯಮದಿಂದ ಕೆಲವರು ಈಗ ಸಂಕಷ್ಟಕ್ಕೀಡಾಗಿದ್ದಾರೆ. ಆದರೆ ಕಾರ್ಡ್ ರದ್ದತಿ ಪ್ರಕ್ರಿಯೆಯಿಂದ 1,500 ಕೋಟಿ ರೂ. ಹಣ ಉಳಿತಾಯ ಮಾಡಿ ಗ್ಯಾರಂಟಿ ಯೋಜನೆಗೆ ಹೊಂದಿಸಬಹುದು ಎಂಬುದು ಸರ್ಕಾರದ ಲೆಕ್ಕಾಚಾರ.

ಇಷ್ಟು ದಿನ ಮನೆಯ ಯಜಮಾನನ ಆದಾಯ ಮಾತ್ರ ನೋಡಲಾಗುತ್ತಿತ್ತು. ಆದರೆ ಈಗ ಕುಟುಂಬದ ಎಲ್ಲಾ ಸದಸ್ಯರ ಆದಾಯ ಪ್ರಮಾಣವನ್ನೂ ಲೆಕ್ಕ ಹಾಕಿ ವಾರ್ಷಿಕವಾಗಿ 1.20 ಲಕ್ಷ ಕ್ಕಿಂತ ಹೆಚ್ಚಿನ ಆದಾಯ ಹೊಂದಿದವರಿಗೆ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ.

ಆದರೆ ಯಜಮಾನ, ಯಜಮಾನಿ ಅಲ್ಲದೆ, ಮನೆಯಲ್ಲಿ ಓದುವ ಮಕ್ಕಳ ಆದಾಯವನ್ನೂ ಪರಿಗಣಿಸುವುದು ಎಷ್ಟು ಸರಿ? ಇದು ನಿಜಕ್ಕೂ ಬಡವರಿಗೆ ಅನ್ಯಾಯ ಮಾಡಿದಂತೆ. ಈಗಾಗಲೇ ಅನ್ನಭಾಗ್ಯ ಯೋಜನೆಯಲ್ಲಿ ಪಡಿತರ ಆಹಾರ ಪಡೆಯುತ್ತಿದ್ದ 12 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಈಗ ಆಹಾರ ತಪ್ಪಿಹೋಗಲಿದೆ.  ವಿಶೇಷವಾಗಿ ಮಳೆಗಾಲದಲ್ಲಿ ಕಟ್ಟಡ ಕಾರ್ಮಿಕರು, ಕೂಲಿ ಕೆಲಸಗಾರರಿಗೆ ಆದಾಯವಿರುವುದಿಲ್ಲ. ಆದರೆ ವಾರ್ಷಿಕ ಆದಾಯ ಲೆಕ್ಕದಲ್ಲಿ 1.20 ಲಕ್ಷಕ್ಕೂ ಹೆಚ್ಚು ಆದಾಯವಿದೆ ಎಂದು ಸರ್ಕಾರ ಲೆಕ್ಕ ಹಾಕಿ ಬಿಪಿಎಲ್ ಕಾರ್ಡ್ ರದ್ದುಗೊಳಿಸಿದರೆ ನಾವು ಏನು ಮಾಡಬೇಕು ಎಂದು ಹಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments