Webdunia - Bharat's app for daily news and videos

Install App

ಸಿವಿಲ್ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ವೋಟ್ ಬ್ಯಾಂಕ್ ಗೆ ಕುತ್ತು ಬರುವ ಭೀತಿಯಲ್ಲಿ ಸರ್ಕಾರ ಯೂ ಟರ್ನ್

Krishnaveni K
ಮಂಗಳವಾರ, 12 ನವೆಂಬರ್ 2024 (12:15 IST)
ಬೆಂಗಳೂರು: ಸಿವಿಲ್ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮ್ ಸಮುದಾಯದವರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿರುವ ಬೆನ್ನಲ್ಲೇ ಸರ್ಕಾರ ಸ್ಪಷ್ಟನೆ ನೀಡಿದೆ.

ಸಿಎಂ ಸಿದ್ದರಾಮಯ್ಯ ಪ್ರಸ್ತಾವನೆಗೆ ಅನುಮೋದನೆ ನೀಡಿದ ವಿಚಾರವಾಗಿ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರ ಸಾರ್ವಜನಿಕವಾಗಿ ಚರ್ಚೆಗೆ ಕಾರಣವಾಗಬಹುದು ಮತ್ತು ನಾಳೆ ನಡೆಯಲಿರುವ ಉಪಚುನಾವಣೆ ಮೇಲೆ ಪರಿಣಾಮ ಬೀರಬಹುದು ಎಂದು ಅರಿತ ಸರ್ಕಾರ ಯೂ ಟರ್ನ್ ಹೊಡೆದಿದೆ.


ಉಪಚುನಾವಣೆಗೆ ಒಂದು ದಿನ ಬಾಕಿ ಇರುವಾಗ ಮುಸ್ಲಿಮ್ ಮೀಸಲಾತಿ ವಿವಾದ ಭುಗಿಲೇಳುವ ಲಕ್ಷಣಗಳು ಕಂಡುಬಂದ ಬೆನ್ನಲ್ಲೇ ಸಿಎಂ ಕಚೇರಿ ಇದಕ್ಕೆ ಸ್ಪಷ್ಟನೆ ನೀಡಿದೆ. ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿ ಎಂದು ಮುಸ್ಲಿಂ ಸಮುದಾಯದ ಮುಖಂಡರಿಂದ ಬೇಡಿಕೆ ಮುಂದಿಡಲಾಗಿತ್ತು.

ಆದರೆ ರಾಜ್ಯ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ. ಅಲ್ಪಸಂಖ್ಯಾತ ಇಲಾಖೆ, ಸಚಿವರು, ಶಾಸಕರು ನೀಡಿದ ಪ್ರಸ್ತಾವನೆಗೆ ಸಿಎಂ ಸಹಿ ಹಾಕಿ ಕಡತ ಮಂಡಿಸಲು ಸೂಚಿಸಿದ್ದಾರಷ್ಟೇ ಎಂದು ಸ್ಪಷ್ಟನೆ ನೀಡಿದೆ. ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಮಂಡನೆಯಾಗಲಿದೆ ಎಂದು ಸುದ್ದಿಗಳಿತ್ತು.

ಆದರೆ ಈಗ ನಾಳೆ ನಡೆಯಲಿರುವ ಉಪಚುನಾವಣೆಯಲ್ಲಿ ಮತಕ್ಕೆ ಕುತ್ತು ಬೀಳುವುದೋ ಎಂದು ಭಯ ಬಿದ್ದ ಸರ್ಕಾರ ಈಗ ಯೂ ಟರ್ನ್ ಹೊಡೆದಿದ್ದು, ವಿವಾದಕ್ಕೆ ತೇಪೆ ಹಚ್ಚುವ ಕೆಲಸ ಮಾಡಿದೆ. ಸಚಿವ ಜಮೀರ್ ಅಹ್ಮದ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಈ ಸಂಬಂಧ ಬೇಡಿಕೆ ಮಂಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments