Webdunia - Bharat's app for daily news and videos

Install App

ಉದ್ಯಮಿಗಳ ಒತ್ತಡಕ್ಕೆ ಮಣಿಯಿತಾ ಸರ್ಕಾರ? ಕನ್ನಡಿಗರಿಗೆ ಮೀಸಲಾತಿಗೆ ತಡೆ

Krishnaveni K
ಗುರುವಾರ, 18 ಜುಲೈ 2024 (09:45 IST)
ಬೆಂಗಳೂರು: ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಧೇಯಕ ಪಾಸ್ ಮಾಡಿ ಬೀಗಿದ್ದ ರಾಜ್ಯ ಸರ್ಕಾರಕ್ಕೆ ಈಗ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಈಗ ಮಸೂದೆಗೆ ತಾತ್ಕಾಲಿಕ ತಡೆ ನೀಡಿದೆ.

ಈ ಮೊದಲು ವಿಧೇಯಕದಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50 ರಷ್ಟು, ಇತರೆ ಹುದ್ದೆಗಳಲ್ಲಿ ಶೇ.75 ಮತ್ತು ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಶೇ.100 ರಷ್ಟು ಕನ್ನಡಿಗರಿಗೆ ಮೀಸಲಾತಿ ಎಂದು ಹೇಳಲಾಗಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿದ್ದರು. ಆದರೆ ಸಿಎಂ ಟ್ವೀಟ್ ಮಾಡುತ್ತಿದ್ದಂತೇ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗಿತ್ತು.

ಕೆಲವೊಂದು ಉದ್ಯೋಗಗಳಿಗೆ ಕೌಶಲ್ಯ ಅಗತ್ಯವಿದೆ. ಖಾಸಗಿ ಸಂಸ್ಥೆಗಳ ನೇಮಕಾತಿ ವಿಚಾರದಲ್ಲಿ ತಲೆ ಹಾಕಬೇಡಿ ಎಂದು ಉದ್ಯಮಿಗಳು ಎಚ್ಚರಿಕೆ ನೀಡಿದ್ದರು. ಇದರ ನಂತರ ಸರ್ಕಾರ ಕೊಂಚ ಮೆತ್ತಗಾಗಿದೆ. ಉದ್ಯಮಿಗಳನ್ನು ಎದುರು ಹಾಕಿಕೊಂಡರೆ ಆರ್ಥಿಕತೆಗೆ ಧಕ್ಕೆಯಾಗುತ್ತದೆ. ಹೀಗಾಗಿ ಈಗ ವಿಧೇಯಕದ ಬಗ್ಗೆ ಪುನರ್ ಪರಿಶೀಲನೆ ನಡೆಸಲು ತೀರ್ಮಾನಿಸಿದೆ.

ಮುಂದಿನ ದಿನಗಳಲ್ಲಿ ಉದ್ಯಮಿಗಳೊಂದಿಗೆ ಸಮಾಲೋಚಿಸಿಯೇ ನಿಯಮ ರೂಪಿಸುವುದಾಗಿ ಹೇಳಿದೆ. ತರಾತುರಿ ಮಾಡಿ ಮತ್ತಷ್ಟು ಸಿಲುಕುವುದು ಬೇಡ ಎಂದು ತೀರ್ಮಾನಕ್ಕೆ ಬರಲಾಗಿದೆ. ಸ್ವತಃ ಸಂಪುಟ ಸಹೋದ್ಯೋಗಿಗಳಿಂದಲೇ ಸರ್ಕಾರದ  ನಿರ್ಧಾರಕ್ಕೆ ಆಕ್ಷೇಪ ಕೇಳಿಬಂದಿದೆ. ಹೀಗಾಗಿ ಈಗ ವಿದೇಯಕಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments