Webdunia - Bharat's app for daily news and videos

Install App

ವಕ್ಫ್ ವಿವಾದದ ಬೆನ್ನಲ್ಲೇ ಮುಸ್ಲಿಂ ಖಬರಸ್ತಾನಕ್ಕೆ ಕಂದಾಯ ಭೂಮಿ ಮಂಜೂರು: ಸರ್ಕಾರದಿಂದ ಮತ್ತೆ ವಿವಾದ

Krishnaveni K
ಶುಕ್ರವಾರ, 15 ನವೆಂಬರ್ 2024 (10:52 IST)
ಬೆಂಗಳೂರು: ವಕ್ಫ್ ವಿವಾದದ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ವಿವಾದ ಮೈಮೇಲೆಳೆದುಕೊಂಡಿದೆ. ಮುಸ್ಲಿಮರ ಖಬರಸ್ತಾನಕ್ಕೆ ಕಂದಾಯ ಇಲಾಖೆಯ ಜಮೀನು ನೀಡಲು ಮುಂದಾಗಿರುವುದರ ಬಗ್ಗೆ ಪರ-ವಿರೋಧ ಚರ್ಚೆ ಶುರುವಾಗಿದೆ.

ರಾಜ್ಯದ 328 ಖಬರಸ್ತಾನಗಳಿಗೆ ಕಂದಾಯ ಇಲಾಖೆ ಜಮೀನು ನೀಡಲು ಮುಂದಾಗಿರುವುದು ವಿವಾದಕ್ಕೀಡು ಮಾಡಿದೆ. ಈಗಾಗಲೇ ವಕ್ಫ್ ಬೋರ್ಡ್ ರೈತರು, ಮಠ-ಮಂದಿರಗಳು, ಸರ್ಕಾರೀ ಜಮೀನುಗಳಿಗೆ ನೋಟಿಸ್ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದರ ಬಗ್ಗೆ ಬಿಜೆಪಿ ಭಾರೀ ಪ್ರತಿಭಟನೆಯನ್ನೂ ಮಾಡಿತ್ತು.

ಇದೀಗ ಬರೋಬ್ಬರಿ 2750 ಎಕರೆ ಭೂಮಿಯನ್ನು ಮುಸ್ಲಿಮ್ ಖಬರಸ್ತಾನಗಳಿಗೆ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರಿ ಭೂಮಿಯನ್ನು ಖಬರಸ್ತಾನವಾಗಿ ಪರಿವರ್ತನೆ ಮಾಡಲು ಸರ್ಕಾರ ಮುಂದಾಗಿರುವುದು ಮತ್ತೆ ಟೀಕೆಗೆ ಗುರಿಯಾಗಿದೆ. ವಕ್ಫ್ ಅಧೀನದಲ್ಲಿರುವ ಮಸೀದಿ, ಪ್ರಾರ್ಥನಾ ಮಂದಿರಗಳ ಖಬರಸ್ತಾನಗಳಿಗೆ ಸರ್ಕಾರೀ ಜಮೀನು ನೀಡಲು ಮುಂದಾಗಿದೆ.

ಬೆಂಗಳೂರು, ರಾಯಚೂರು, ಹಾಸನ, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೂಮಿ ಮಂಜೂರು ಮಾಡಲು ಮುಂದಾಗಿದೆ. ರಾಜ್ಯ ಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆಯು ಪ್ರಗತಿ ಪರಿಶೀಲನಾ ಸಭೆಯಲ್ಲಿ 328 ಖಬರಸ್ತಾನಗಳಿಗೆ ಜಮೀನು ನೀಡುವಂತೆ ಮನವಿ ಮಾಡಿತ್ತು. ಇದಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಸರ್ಕಾರೀ ಭೂಮಿ ಲಭ್ಯವಿಲ್ಲದಿದ್ದರೆ ಖಾಸಗಿ ಭೂಮಿ ಖರೀದಿಸಿ ವಿತರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments