Webdunia - Bharat's app for daily news and videos

Install App

ಬಿಪಿಎಲ್ ಕಾರ್ಡ್ ರದ್ದು ಮಾಡುವುದರಿಂದ ಸರ್ಕಾರಕ್ಕೆ 30 ಸಾವಿರ ಕೋಟಿ ಲಾಭ

Krishnaveni K
ಗುರುವಾರ, 21 ನವೆಂಬರ್ 2024 (14:09 IST)
ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದು ಮಾಡುವುದರಿಂದ ರಾಜ್ಯ ಸರ್ಕಾರಕ್ಕೆ 20 ರಿಂದ 30 ಸಾವಿರ ಕೋಟಿ ಲಾಭವಾಗುತ್ತದೆ. ಅದಕ್ಕಾಗಿಯೇ ಬಿಪಿಎಲ್ ರದ್ದು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಪಿಎಲ್ ಕಾರ್ಡ್ ರದ್ದು ಮಾಡುವುದರಿಂದ ರಾಜ್ಯ ಸರ್ಕಾರಕ್ಕೆ ಸುಮಾರು 30 ಸಾವಿರ ಕೋಟಿ ರೂ. ಉಳಿತಾಯವಾಗುತ್ತದೆ. ಇದನ್ನು ಇಟ್ಟುಕೊಂಡು ನಿಮ್ಮ ಶಾಸಕರನ್ನು ಸಂತೃಪ್ತಿಗೊಳಿಸಲು ಬಳಸುತ್ತೀರಿ. ಸರ್ಕಾರದ ಬಳಿಕ ಒಂದು ರೂಪಾಯಿ ಇಲ್ಲ ಈಗ. ಅದಕ್ಕೇ ಈ ರೀತಿ ಬಡವರ ಅನ್ನಕ್ಕೆ ಕೈ ಹಾಕಿದ್ದೀರಿ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಕಚೇರಿ ನವೀಕರಣಕ್ಕೆ 2 ಕೋಟಿ ರೂ. ಖರ್ಚು ಮಾಡುತ್ತಾರೆ. ಆದರೆ ಬಡವರಿಗೆ ಒಂದು ತಿಂಗಳಿಗೆ 100-150 ರೂ. ರೇಷನ್ ಕೊಡೋದು. ಅದಕ್ಕೂ ಕಲ್ಲು ಹಾಕುತ್ತೀರಿ. ನಿಮಗೆ ಮಾತ್ರ ಐಷಾರಾಮಿ ಜೀವನ ಬೇಕು. ಆದರೆ ಬಡವರಿಗೆ ಅನ್ನ ಕೊಡಲು ಯಾಕೆ ಕಲ್ಲು ಹಾಕುತ್ತೀರಿ ಎಂದು ಅಶೋಕ್ ಪ್ರಶ್ನೆ ಮಾಡಿದ್ದಾರೆ.

ಇನ್ನೇನು ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಅದಕ್ಕೆ ಮೊದಲು ಬಿಪಿಎಲ್ ಕಾರ್ಡ್ ರದ್ದಾಗಿರುವವರದ್ದೆಲ್ಲಾ ಅದೇ ರೀತಿ ವಾಪಸ್ ಆಗಬೇಕು. ಮತ್ತೆ ಅವರನ್ನು ಅರ್ಜಿ ತೆಗೆದುಕೊಂಡು ಬನ್ನಿ ಎಂದು ಕಚೇರಿಗೆ ಅಲೆಯಿಸುವುದೆಲ್ಲಾ ಬೇಡ. ಯಥಾ ಪ್ರಕಾರ ಬಿಪಿಎಲ್ ಕಾರ್ಡ್ ರೇಷನ್ ಸಿಗುವಂತೆ ಮಾಡಬೇಕು. ಈ ತಿಂಗಳಿನದ್ದೂ ಸೇರಿಸಿ ರೇಷನ್ ಕೊಡಬೇಕು. ಇಲ್ಲದೇ ಹೋದರೆ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments