Webdunia - Bharat's app for daily news and videos

Install App

ಮಾಧ್ಯಮಗಳಿಗೆ ಅಂಕುಶ ಹಾಕಲು ಸರ್ಕಾರದಿಂದ ಸದನ ಸಮಿತಿ ರಚನೆ

Webdunia
ಮಂಗಳವಾರ, 28 ಮಾರ್ಚ್ 2017 (19:19 IST)
ಸುದ್ದಿ ಮಾಧ್ಯಮಗಳನ್ನ ನಿಯಂತ್ರಿಸಲು ಆರೋಗ್ಯ ಸಚಿವ ರಮೇಶ್ ಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಜಂಟಿ ಸದನ ಸಮಿತಿ ರಚಿಸಿದೆ.  ಈ ಸಮಿತಿಯಲ್ಲಿ ವಿಧಾನಸಭೆ ಮತ್ತು ಪರಿಷತ್`ನ ಎರಡೂ ಸದನಗಳ ಸದಸ್ಯರನ್ನ ನೇಮಿಸಲಾಗಿದೆ.

ಸಾ. ರಾ. ಮಹೇಶ್, ಭರಮಗೌಡ ಕಾಗೆ, ಸುರೇಶ್ ಗೌಡ, ಸೋಮಶೇಖರ್, ಶಿವರಾಜ್ ತಂಗಡಗಿ, ಎಸ್.ಎ. ಹ್ಯಾರಿಸ್ ಸೇರಿದಂತೆ ಸದನದಲ್ಲಿ ಮಾಧ್ಯಮಗಳ ವಿರುದ್ಧ ಆಕ್ಷೇಪ ಎತ್ತಿದ್ದ ಶಾಸಕರುಗಳೇ ಸದನದಲ್ಲಿದ್ದಾರೆ. ಈ ಹಿಂದೆಯೇ ಸ್ಪೀಕರ್ ಕೆ.ಬಿ. ಕೋಳಿವಾಡ ಸದನ ಸಮಿತಿ ರಚಿಸುವ ಬಗ್ಗೆ ಘೋಷಿಸಿದ್ದರು.

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಮಾಧ್ಯಮಗಳಿಗೆ ಅಂಕುಶ ಹಾಕಲು ಸದನ ಸಮಿತಿ ರಚನೆ ಸರಿಯಲ್ಲ. ಮಾಧ್ಯಮಗಳ ಸ್ವಾತಂತ್ರ್ಯ ಮೊಟಕುಗೊಳಿಸುವುದು ಸೂಕ್ತವಲ್ಲ. ಪರ್ಯಾಯ ಮಾರ್ಗಗಳ ಮೂಲಕ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಂತೆ ಸ್ಪೀಕರ್`ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಮಾಧ್ಯಮಗಳಲ್ಲಿ ಶಾಸಕರು ಮತ್ತು ಸಚಿವರ ಬಗ್ಗೆ ಅವಹೇಳನಕಾರಿಯಾಗಿ ಸುದ್ದಿ ಪ್ರಸಾರ ಮಾಡಲಾಗುತ್ತಿದೆ. ವೈಯಕ್ತಿಕ ವಿಚಾರಗಳನ್ನ ಕೀಳುಮಟ್ಟದಲ್ಲಿ ತೋರಿಸಲಾಗುತ್ತಿದೆ ಎಂದು ಇತ್ತೀಚೆಗೆ ಶಾಸಕರು ಸದನದಲ್ಲಿ ಆಕ್ಷೇಪ ಎತ್ತಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments