Webdunia - Bharat's app for daily news and videos

Install App

ಪ್ರವೀಣ್ ಗೋಡ್ಖಿಂಡಿ "ಖ್ಯಾತ ಪಿಟೀಲು ವಾದಕ" ಅಂತೆ…!

Webdunia
ಬುಧವಾರ, 20 ಸೆಪ್ಟಂಬರ್ 2017 (08:34 IST)
ಮೈಸೂರು: ಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ ಹೆಸರು ಮತ್ತು ಅವರು ನುಡಿಸುವ ವಾದ್ಯ ಎಲ್ಲರಿಗೂ ಚಿರಪರಿಚಿತ. ದೇಶವಲ್ಲದೆ ವಿದೇಶದಲ್ಲೂ ತಮ್ಮ ಕೊಳಲು ವಾದಕ್ಕೆ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಮಹಾನ್ ಕಲಾವಿದರು. ಆದರೆ ಈ ನಮ್ಮ ಕರ್ನಾಟಕ ಸರ್ಕಾರಕ್ಕೆ ಮಾತ್ರ ಪ್ರವೀಣ್ ಗೋಡ್ಖಿಂಡಿ ಯಾವ ವಾದ್ಯ ನುಡಿಸುತ್ತಾರೆ ಎಂದೇ ಇನ್ನೂ ತಿಳಿದಿಲ್ಲ.

ಪ್ರತಿವರ್ಷ ದಸರಾ ಸಮಯದಲ್ಲಿ ಒಂದಿಲ್ಲೊಂದು ಚರ್ಚೆಗೆ ಗ್ರಾಸವಾಗುವ ರಾಜ್ಯ ಸರ್ಕಾರ, ಸಂಗೀತ ಕಲಾವಿದರ ವಿಷಯದಲ್ಲಿ ದೊಡ್ಡ ಎಡವಟ್ಟು ಮಾಡಿದೆ. ಸೆಪ್ಟೆಂಬರ್ 21ರಿಂದ ಅಂದರೆ ನಾಳೆಯಿಂದ 8 ದಿನ ಅರಮನೆ ನಗರಿ ಮೈಸೂರಿನಲ್ಲಿ ವೈಭಯುತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸೆ. 28ರಂದು ಸಂಜೆ 7.30ಕ್ಕೆ ಹಿಂದೂಸ್ತಾನಿ ಗಾಯನ ಮತ್ತು ಕೊಳಲುವಾದನ ಜುಗಲ್ ಬಂದಿ ನಡೆಯಲಿದೆ. ಇದರಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಜಯತೀರ್ಥ ಮೇವುಂಡಿ ಮತ್ತು ಪ್ರಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಆದರೆ ಮೈಸೂರು ದಸರಾ ಸಾಂಸ್ಕೃತಿಕ ಉತ್ಸವ ಸಮಿತಿ ಆಮಂತ್ರಣ ಪತ್ರಿಕೆಯಲ್ಲಿ ಪ್ರವೀಣ್ ಗೋಡ್ಖಿಂಡಿ ಖ್ಯಾತ ಪಿಟೀಲು ವಾದಕರು ಎಂದು ತಪ್ಪಾಗಿ ಮುದ್ರಿಸಿ ಪೇಚಿಗೆ ಸಿಲುಕಿದೆ.

ವಾಟ್ಸಪ್ ಗ್ರೂಪ್ ವೊಂದರಲ್ಲಿ ಈ ಕುರಿತು ಚರ್ಚೆಯಾಗಿದ್ದು, `ನಾನು ಪಿಟೀಲು ನುಡಿಸುವುದು ನನಗೆ ಗೊತ್ತಿಲ್ಲವೇ’ ಎಂದು ಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ ಪ್ರತಿಕ್ರಿಯಿಸಿದ್ದಾರೆ.

ಒಟ್ಟಿನಲ್ಲಿ ಯಾರು ಏನು ಬಾರಿಸ್ತಾರೆ ಎಂದೇ ಸರಿಯಾಗಿ ತಿಳಿಯದೆ ಅಪ್ರತಿಮ ಕಲಾವಿದರ ವಿಷಯದಲ್ಲಿ ಈ ರೀತಿ ನಡೆದುಕೊಳ್ಳುವುದು ಎಷ್ಟು ಸರಿ ಎಂದು ಸಂಗೀತ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಸರ್ಕಾರ ಈ ರೀತಿಯ ತಪ್ಪು ಮಾಡದೆ, ಕಲಾವಿದರನ್ನು ಗೌರವಿಸಲಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಮುಂದಿನ ಸುದ್ದಿ
Show comments