Select Your Language

Notifications

webdunia
webdunia
webdunia
webdunia

ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

Siddaramaiah

Krishnaveni K

ಬೆಂಗಳೂರು , ಗುರುವಾರ, 19 ಜೂನ್ 2025 (15:43 IST)
ಬೆಂಗಳೂರು: ಈಗಾಗಲೇ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿತ್ತು. ಇದೀಗ ವಸತಿ ಯೋಜನೆಯಲ್ಲೂ ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ.

ಇಂದು ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲಾತಿಯನ್ನು ಶೇ.15 ಕ್ಕೆ ಹೆಚ್ಚಳ ಮಾಡಲು ಚರ್ಚೆ ಮಾಡಲಾಗುತ್ತಿದೆ. ಈಗಾಗಲೇ ವಸತಿ ಯೋಜನೆಯಲ್ಲಿ ಶೇ.10 ರಷ್ಟು ಮೀಸಲಾತಿಯಿದೆ. ಆದರೆ ಇದೀಗ ಸಚಿವ ಜಮೀರ್ ಅಹ್ಮದ್ ಶೇ.15 ಕ್ಕೆ ಹೆಚ್ಚಳ ಮಾಡಲು ಬೇಡಿಕೆಯಿಟ್ಟಿದ್ದಾರೆ. ಇದೀಗ ಸಚಿವ ಸಂಪುಟ ಸಭೆಯಲ್ಲಿ ಇದು ಚರ್ಚೆಯಾಗುತ್ತಿದೆ.

ಈಗಾಗಲೇ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಿ ಸರ್ಕಾರ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಮತ್ತೊಮ್ಮೆ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ ಮಾಡಲು ಮುಂದಾಗಿರುವುದು ವಿವಾದಕ್ಕೆ ಕಾರಣವಾಗಲಿದೆ. ಮುಸ್ಲಿಮರಿಗೆ ಯಾವ ಆಧಾರದಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗುತ್ತಿದೆ ಎಂಬ ಪ್ರಶ್ನೆ ಬರಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ