Webdunia - Bharat's app for daily news and videos

Install App

ವಕ್ಫ್ ನ ಈ ಒಂದು ಅಧಿಕಾರಕ್ಕೆ ಕತ್ತರಿ ಹಾಕಿದ ಹೈಕೋರ್ಟ್

Krishnaveni K
ಶುಕ್ರವಾರ, 22 ನವೆಂಬರ್ 2024 (10:31 IST)
ಬೆಂಗಳೂರು: ರಾಜ್ಯದಲ್ಲಿ ವಕ್ಫ್ ವಿವಾದ ಕಾವೇರಿರುವ ಬೆನ್ನಲ್ಲೇ ವಕ್ಫ್ ಮಂಡಳಿಯ ಅಧಿಕಾರವೊಂದಕ್ಕೆ ಕರ್ನಾಟಕ ಹೈಕೋರ್ಟ್ ಕತ್ತರಿ ಹಾಕಿದ್ದು, ಅಧಿಕಾರ ಕೊಟ್ಟವರಿಗೂ ಚಾಟಿ ಬೀಸಿದೆ.

ವಕ್ಫ್ ಮಂಡಳಿ ಇದುವರೆಗೆ ವಿವಾಹಿತ ಮುಸ್ಲಿಂ ದಂಪತಿಗಳಿಗೆ ವಿವಾಹ ನೋಂದಣಿ ಪತ್ರ ನೀಡುತ್ತಿತ್ತು. ರಾಜ್ಯ ಅಲ್ಪ ಸಂಖ್ಯಾತರ ಇಲಾಖೆಯ ಸೂಚನೆ ಮೇರೆಗೆ ಈ ಪರಮಾಧಿಕಾರ ಹೊಂದಿತ್ತು ಎನ್ನಲಾಗಿದೆ. ಆದರೆ ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಇದರ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಕ್ಫ್ ಮಂಡಳಿಗೆ ಈ ಅಧಿಕಾರವನ್ನು ಕೊಟ್ಟವರು ಯಾರು ಎಂದು ತಪರಾಕಿ ನೀಡಿತ್ತು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಕ್ಫ್ ಮಂಡಳಿ ಅಧಿಕಾರಕ್ಕೆ ಕತ್ತರಿ ಹಾಕಿದೆ. ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಿಸುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ವಿಧಿಸಿದೆ.

ನ್ಯಾಯಾಲಯದ ಮುಂದಿನ ಆದೇಶದವರೆಗೂ ರಾಜ್ಯ ಸರ್ಕಾರದ ಆದೇಶವನ್ನು ಅಮಾನತಿನಲ್ಲಿಡಬೇಕು. ಯಾವುದೇ ಅಧಿಕಾರ ಇಲ್ಲದೇ ವಕ್ಫ್ ಮಂಡಳಿ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಿಸಬಾರದು. ವಕ್ಫ್ ಕಾಯ್ದೆ 1995 ರ ಪ್ರಕಾರ ಅನ್ವಯ ವಕ್ಫ್ ಮಂಡಳಿಗೆ ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ನಿರ್ವಹಣೆ ಮಾಡುವುದು ಮಾತ್ರ ವಕ್ಫ್ ಕಾರ್ಯವ್ಯಾಪ್ತಿಯಾಗಿದೆ. ಅದರ ಹೊರತಾಗಿ ವಿವಾಹ ಪ್ರಮಾಣ ಪತ್ರ ನೀಡುವ ಅಧಿಕಾರವಿಲ್ಲ ಎಂದು ಹೈಕೋರ್ಟ್ ಚಾಟಿ ಬೀಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡುವ ಬಗ್ಗೆ ಕುಟುಂಬಕ್ಕೆ ಮಾಹಿತಿ ಇತ್ತಾ: ಅನಿರುದ್ಧ ಹೇಳಿದ್ದೇನು

ಮುಂದಿನ ಸುದ್ದಿ
Show comments