Webdunia - Bharat's app for daily news and videos

Install App

ಮುಸ್ಲಿಂ ದಂಪತಿಗೆ ವಕ್ಫ್ ನಿಂದಲೇ ವಿವಾಹ ನೋಂದಣಿ: ವಕ್ಫ್ ಗೆ ಸರ್ಕಾರದಿಂದಲೇ ಮತ್ತೊಂದು ಪರಮಾಧಿಕಾರ

Krishnaveni K
ಶನಿವಾರ, 16 ನವೆಂಬರ್ 2024 (10:08 IST)
ಬೆಂಗಳೂರು: ಮುಸ್ಲಿಂ ದಂಪತಿಗಳಿಗೆ ವಿವಾಹ ನೋಂದಣಿ ಪತ್ರವನ್ನೂ ವಕ್ಫ್ ಬೋರ್ಡ್ ನೀಡುತ್ತಿರುವುದು ಗಮನಕ್ಕೆ ಬಂದಿದ್ದು ಇದರ ಬಗ್ಗೆ ಹೈಕೋರ್ಟ್ ಗರಂ ಆಗಿ ಪ್ರಶ್ನೆ ಮಾಡಿದೆ.

ಈ ಬಗ್ಗೆ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇದರ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಈ ಸಂಬಂಧ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಈಗಾಗಲೇ ವಕ್ಫ್ ನೋಟಿಸ್  ವಿಚಾರವಾಗಿ ಭಾರೀ ವಿವಾದವಾಗಿದೆ. ಇದರ ಮಧ್ಯೆ ವಕ್ಫ್ ಬೋರ್ಡ್ ನ ಮತ್ತೊಂದು ಅವಾಂತರ ಬೆಳಕಿಗೆ ಬಂದಿದೆ.

ಮುಸ್ಲಿಂ ವಿವಾಹಿತ ದಂಪತಿಗೆ ವಕ್ಫ್ ಬೋರ್ಡ್ ನಿಂದಲೇ ವಿವಾಹ ನೋಂದಣಿ ಪತ್ರ ನೀಡುವ ಅಧಿಕಾರವನ್ನು ನೀಡಿರುವ ಬಗ್ಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ 2023 ರ ಆಗಸ್ಟ್ 30 ರಂದು ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಲಂ ಪಾಷಾ ಎಂಬವರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಇದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್ ಎ ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರ ನ್ಯಾಯಪೀಠ ಸರ್ಕಾರದ ಮೇಲೆ ಗರಂ ಆಗಿ ಪ್ರಶ್ನೆ ಮಾಡಿದೆ. ವಕ್ಫ್ ಮಂಡಳಿಗೆ ಯಾವ ಆಧಾರದಲ್ಲಿ ಅಧಿಕಾರ ನೀಡಲಾಗಿದೆ ಎಂದು ಪ್ರಶ್ನಿಸಿದ್ದಲ್ಲದೆ ಎರಡು ದಿನದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಮುಂದಿನ ವಿಚಾರಣೆಯನ್ನು ನವಂಬರ್ 21 ಕ್ಕೆ ಮುಂದೂಡಲಾಗಿದೆ. ವಿವಾಹ ನೋಂದಣಿ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಬಹುದು ಎಂಬುದ ವಕ್ಫ್ ಕಾಯ್ದೆಯಲ್ಲಿ ಎಲ್ಲಿದೆ ಎಂದು ಸಾಬೀತಪಡಿಸಲು ಹೈಕೋರ್ಟ್ ಸೂಚಿಸಿದೆ. ಈ ಬಗ್ಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments