ಕರ್ನಾಟಕ – ತೆಲಂಗಾಣ ಗಡಿ ಸಮಸ್ಯೆ ಬಗೆಹರಿದದ್ದು ಹೇಗೆ ಗೊತ್ತಾ?

Webdunia
ಶನಿವಾರ, 22 ಡಿಸೆಂಬರ್ 2018 (13:08 IST)
ತೆಲಂಗಾಣ ಮತ್ತು ಕರ್ನಾಟಕ ರಾಜ್ಯದ ಗಡಿ ಸಮಸ್ಯೆಯನ್ನು ಬಗೆ ಹರಿಸಲು ಉಭಯ ರಾಜ್ಯಗಳ ಜಿಲ್ಲಾಧಿಕಾರಿಗಳು ಮಹತ್ವದ ಒಪ್ಪಂದಕ್ಕೆ ಹಾಗೂ ನಿರ್ಣಯಕ್ಕೆ ಬಂದಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋತಂಗಲ್ ಗ್ರಾಮದ ಹತ್ತಿರ ಉದ್ಭವಿಸಿರುವ ತೆಲಂಗಾಣ ಮತ್ತು ಕರ್ನಾಟಕ ರಾಜ್ಯದ ಗಡಿ ಸಮಸ್ಯೆಯನ್ನು ಬಗೆ ಹರಿಸಲು ರಾಜ್ಯಗಳನ್ನು ವಿಭಜಿಸುವ ಕಾಗಿಣಾ ನದಿಯ ಮಧ್ಯಭಾಗದಿಂದ  ರಾಜ್ಯದ ಗಡಿ ಗುರುತಿಸುವಂತೆ ಜಿಲ್ಲಾಧಿಕಾರಿಗಳು ನಿರ್ಣಯಿಸಿದರು.

ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಹಾಗೂ ತೆಲಂಗಾಣ ರಾಜ್ಯದ ವಿಕಾರಾಬಾದ ಜಿಲ್ಲೆಯ ಜಿಲ್ಲಾಧಿಕಾರಿ ಸೈಯದ್ ಓಮರ್ ಜಲೀಲ ಅವರು ಜಂಟಿಯಾಗಿ ಉಭಯ ಜಿಲ್ಲೆಗಳ ಕಂದಾಯ, ಭೂದಾಖಲೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಚಿಂಚೋಳಿ ತಾಲೂಕಿನ ಪೋತಂಗಲ್ ಗ್ರಾಮದ ಹತ್ತಿರ ಕಾಗಿಣಾ ನದಿಯ ದಂಡೆಯಲ್ಲಿ  ಚರ್ಚಿಸಿ ನಿರ್ಣಯ ಕೈಗೊಂಡರು.
ಕಲಬುರಗಿ ಜಿಲ್ಲಾಧಿಕಾರಿಗಳು 1913 ರಲ್ಲಿ  ರೂಪಿಸಲಾಗಿರುವ ನಕಾಶೆಯೊಂದಿಗೆ ವಿಕಾರಾಬಾದ ಜಿಲ್ಲಾಧಿಕಾರಿಗಳ ಹತ್ತಿರದ 1940 ರ ನಕಾಶೆಯೊಂದಿಗೆ ರಾಜ್ಯಗಳ ಗಡಿಭಾಗವನ್ನು ತಾಳೆಮಾಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, 1913 ರಲ್ಲಿ ರಚಿಸಲಾಗಿರುವ ಭೂದಾಖಲೆಗಳ ಪ್ರಕಾರ ಸಧ್ಯ ತೆಲಂಗಾಣ ರಾಜ್ಯದ ವಿಕಾರಾಬಾದದ  ತಾಂಡೂರ ತಾಲೂಕು ಕಲಬುರಗಿ ಜಿಲ್ಲೆಯ ಭಾಗವಾಗಿತ್ತು. ರಾಜ್ಯಗಳು ವಿಭಜನೆಯಾದ ನಂತರ ಕಲಬುರಗಿ ಜಿಲ್ಲೆಯಲ್ಲಿರುವ ಭೂದಾಖಲೆಗಳ ಟಿಪ್ಪಣಿಗಳ ಪ್ರಕಾರ ಸರ್ವೇ ಮಾಡಿಸಲಾಗಿದೆ. ಅದರಂತೆ ಕರ್ನಾಟಕ ರಾಜ್ಯದ ಗಡಿಭಾಗವು ಕಾಗಿಣಾ ನದಿಯ ಮಧ್ಯದವರೆಗೆ ಇದ್ದು, ಗಡಿ ಗುರುತಿಸಿ ನದಿಯಲ್ಲಿ ಗಡಿಯ ಕಲ್ಲುಗಳನ್ನು ಸಹ ಅಳವಡಿಸಲಾಗಿದೆ ಎಂದು ವಿವರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು

Karnataka Weather: ಈ ವಾರ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments