ಕೇರಳಕ್ಕಿಂತಲೂ ಕರ್ನಾಟಕಕ್ಕೇ ಭೂಕುಸಿತದ ಅಪಾಯ ಹೆಚ್ಚು: ಹೀಗೇ ಆದರೆ ಅನಾಹುತ ಗ್ಯಾರಂಟಿ

Krishnaveni K
ಶನಿವಾರ, 3 ಆಗಸ್ಟ್ 2024 (10:54 IST)
ಬೆಂಗಳೂರು: ಇತ್ತೀಚೆಗೆ ವಯನಾಡಿನಲ್ಲಿ ನಡೆದ ಗುಡ್ಡ ಕುಸಿತ ದುರಂತ ಎಲ್ಲರನ್ನೂ ಕಂಗೆಡೆಸಿದೆ. ಗುಡ್ಡ ಕುಸಿತದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 300 ದಾಟಿದೆ. ಇನ್ನೂ ಸಾವಿನ ಸಂಖ್ಯೆ ಏರುತ್ತಲೇ ಇದೆ.

ಎಷ್ಟೋ ಜನ ಮಣ್ಣಿನಡಿಯಲ್ಲಿ ಸಮಾಧಿಯಾಗಿದ್ದಾರೆ. ಮತ್ತೆ ಕೆಲವರು ಆಪ್ತರನ್ನು ಕಳೆದುಕೊಂಡು ಕಂಗೆಟ್ಟು ಕುಳಿತಿದ್ದಾರೆ. ತಮ್ಮ ಮನೆ, ಮಠ ಕಳೆದುಕೊಂಡು ಮುಂದೇನು ಎಂಬ ಭವಿಷ್ಯದ ಚಿಂತೆಯಲ್ಲಿದ್ದಾರೆ. ಆದರೆ ಮನುಷ್ಯ ಮಾಡುವ ತಪ್ಪುಗಳಿಗೆ ಪ್ರಕೃತಿಗೆ ಕಲಿಸಿದ ಪಾಠದ ಸ್ಯಾಂಪಲ್ ಅಷ್ಟೇ.

ಹಾಗೆ ನೋಡಿದರೆ ಗುಡ್ಡ ಕುಸಿತದ ಭೀತಿ ಮುಂದಿನ ದಿನಗಳಲ್ಲಿ ಕೇರಳಕ್ಕಿಂತ ಕರ್ನಾಟಕಕ್ಕೇ ಹೆಚ್ಚು. ಇತ್ತೀಚೆಗಿನದ ದಿನಗಳಲ್ಲಿ ಬೆಟ್ಟ ಗುಡ್ಡ ಪ್ರದೇಶಗಳು ಭಾರೀ ಮಳೆ ಬಂದರೆ ಸಾಕು ಕುಸಿದು ಅಪಾಯ ತಂದೊಡ್ಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಮಾನವನ ತಪ್ಪುಗಳೇ ಕಾರಣ.

ಬೆಟ್ಟ-ಗುಡ್ಡಗಳನ್ನು ಕಡಿದು ಮನೆ, ರೆಸಾರ್ಟ್, ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದಾಗಿಯೇ ಮಳೆಗಾಲದಲ್ಲಿ ಮಣ್ಣು ಸಡಿಲಗೊಂಡು ಕುಸಿತವಾಗುತ್ತಿದೆ. ಹಾಗೆ ನೋಡಿದರೆ ಕರ್ನಾಟಕದಲ್ಲಿ ಪಶ್ಚಿಮ ಘಟ್ಟದ ಪ್ರದೇಶಗಳು ಹೆಚ್ಚಿವೆ. ಈಗ ಇಲ್ಲೆಲ್ಲಾ ಒಂದಲ್ಲಾ ಒಂದು ಕಾಮಗಾರಿಗಳು ನಡೆಯುತ್ತಲೇ ಇವೆ.

ಹೀಗಾಗಿ ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೂ ಅಪಾಯ ತಪ್ಪಿದ್ದಲ್ಲ. ವಯನಾಡಿನ ಘಟನೆಯನ್ನು ಎಚ್ಚರಿಕೆಯ ಕರೆಗಂಟೆ ಎಂದು ಪರಿಗಣಿಸಿ ಎಚ್ಚೆತ್ತುಕೊಳ್ಳದೇ ಇದ್ದರೆ ಮುಂದೆ ಕರ್ನಾಟಕದಲ್ಲೂ ಇಂತಹ ಗುಡ್ಡ ಕುಸಿತಗಳು ಸಾಮಾನ್ಯವಾಗಬಹುದು. ಎತ್ತಿನಹೊಳೆ ಎಂಬ ಯೋಜನೆಯಿಂದ ಇತ್ತೀಚೆಗೆ ಶಿರಾಡಿ ಘಾಟಿಯಲ್ಲಿ ಸಂಭವಿಸುತ್ತಿರುವ ಭೂ ಕುಸಿತಗಳು ಇದರ ಮುನ್ಸೂಚನೆಯಾಗಿದೆ.

ಶಿರೂರು, ವಯನಾಡು ಗುಡ್ಡ ಕುಸಿತ ಪ್ರಕರಣದ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಈಗ ಕರ್ನಾಟಕದ ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಂ ಸ್ಟೇ, ರೆಸಾರ್ಟ್ ಗಳ ತೆರವಿಗೆ ಸೂಚನೆ ನೀಡಿದೆ. ಈ ಸಂಬಂಧ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಸುತ್ತೋಲೆ ಹೊರಡಿಸಿದ್ದಾರೆ. ಆದರೆ ಇದು ಕೇವಲ ಆದೇಶಕ್ಕಷ್ಟೇ ಸೀಮಿತವಾಗದೇ ಅರಣ್ಯ ಉಳಿಸುವುದರತ್ತ ನಿಜವಾಗಿಯೂ ಕ್ರಮ ಕೈಗೊಳ್ಳುವಂತಾಗಲಿ ಎಂಬುದೇ ನಮ್ಮ ಹಾರೈಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಮುಂದಿನ ಸುದ್ದಿ
Show comments