Webdunia - Bharat's app for daily news and videos

Install App

ರು.17 ಕೋಟಿ ವೆಚ್ಚದ ಕರ್ನಾಟಕ ಮಾಹಿತಿ ಆಯೋಗ ಕಟ್ಟಡ

Webdunia
ಮಂಗಳವಾರ, 31 ಜನವರಿ 2017 (13:31 IST)
ಸರ್ಕಾರದ ಸಚಿವರುಗಳು, ಅಧಿಕಾರಿಗಳು ಮತ್ತು ಇತರೆ ಸಾರ್ವಜನಿಕ ಉದ್ಯಮಿಗಳಿಂದ ಮಾಹಿತಿ ಪಡೆದುಕೊಳ್ಳುವುದು ಅವಶ್ಯಕತೆಗೆ ಅನುಗುಣವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಪಡೆದುಕೊಳ್ಳಬೇಕೇ ಹೊರತು ಅದನ್ನು ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಪಡೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
 
ಮಾಹಿತಿ ಸೌಧದ ನೂತನ ಕಟ್ಟಡ ಉದ್ಫಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಭಾರತ ದೇಶದಲ್ಲಿ ಕರ್ನಾಟಕ ಮಾಹಿತಿ ಆಯೋಗ ಮಾತ್ರ ಸ್ವಂತ ಕಟ್ಟಡ ಹೊಂದಿದೆ. ಈ ಕಟ್ಟಡದ ಕಾಮಗಾರಿಗಾಗಿ ಸುಮಾರು 17 ಕೋಟಿ ರೂ. ವೆಚ್ಚಮಾಡಲಾಗಿದೆ ಎಂದರು.
 
ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಾಗಬೇಕು ಎಂಬ ಕಾಯ್ದೆ ಅಗತ್ಯವಿತ್ತು. ಆದ್ದರಿಂದ ಈ ಮಾಹಿತಿ ಆಯೋಗವು ಜಾರಿಗೆ ಬಂದಿದೆ. ಮಾಹಿತಿ ದೇಶದ ಜನತೆಯ ಬದುಕಿಗೆ ಸಂಬಂಧಪಟ್ಟಿದ್ದು. ಯಾವುದೇ ರೀತಿಯಲ್ಲಿ ಸರ್ಕಾರದ ಹಣ ದುರುಪಯೋಗವಾಗಬಾರದು ಎಂದರು.
 
ಕಾನೂನು ಸಂಸದೀಯ ವ್ಯವಹಾರ ಮತ್ತು ಸಣ್ಣ ನೀರಾವರಿ ಸಚಿವ ಟಿ.ಬಿ. ಜಯಚಂದ್ರ ಅವರು ಆಡಳಿತದಲ್ಲಿನ ಲೋಪದೋಷವನ್ನು ಎತ್ತಿಹಿಡಿದು ಜನರಿಗೆ ಪಾರದರ್ಶಕವಾದ ಮಾಹಿತಿಯನ್ನು ನೀಡುವುದು ಬಹಳ ಮುಖ್ಯ. ಆದ್ದರಿಂದ ಭವ್ಯ, ಸುಂದರವಾದ ಮಾಹಿತಿಸೌಧವನ್ನು ದೇಶದಲ್ಲೇ ಕರ್ನಾಟಕದ ರಾಜಧಾನಿಯಲ್ಲೇ ನಮ್ಮ ಸರ್ಕಾರ ಮಾಹಿತಿ ಸೌಧವನ್ನು ನಿರ್ಮಿಸಿದೆ ಎಂದು ತಿಳಿಸಿದರು.
 
ಈ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಹಾಗೂ ಬಂದರು, ಒಳನಾಡು, ಜಲಸಾರಿಗೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರರಾದ ಶ್ರೀಮತಿ ಜಿ. ಪದ್ಮಾವತಿ, ಕೇಂದ್ರ ಮಾಹಿತಿ ಆಯೋಗದ ಆಯುಕ್ತ ಶ್ರೀಧರ ಆಚಾರ್ಯ, ರಾಜ್ಯದ ಮುಖ್ಯ ಮಾಹಿತಿ ಆಯುಕ್ತ ಕೃಷ್ಣಕುಮಾರ್ ಮತ್ತು ಇತರೆ ಹಿರಿಯ ಮಾಹಿತಿ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments