Select Your Language

Notifications

webdunia
webdunia
webdunia
webdunia

ಇಂದು ಐತಿಹಾಸಿಕ ಕ್ಷಣಕ್ಕೆ ಕರ್ನಾಟಕ ಸಾಕ್ಷಿ

ಇಂದು ಐತಿಹಾಸಿಕ ಕ್ಷಣಕ್ಕೆ ಕರ್ನಾಟಕ ಸಾಕ್ಷಿ
ಬೆಂಗಳೂರು , ಭಾನುವಾರ, 11 ಜೂನ್ 2023 (09:57 IST)
ಬೆಂಗಳೂರು : ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡೋ ದಿನ ಬಂದೇ ಬಿಡ್ತು. ಇತ್ತ ಸಿಎಂ ಸಿದ್ದರಾಮಯ್ಯ ಕೂಡ ಮಹಿಳೆಯರನ್ನು ಫ್ರೀ ಬಸ್ ಹತ್ತಿಸೋಕೆ ಸಜ್ಜಾಗಿದ್ದಾರೆ.

ಹೌದು. ಇಂದಿನಿಂದ ರಾಜ್ಯಾದ್ಯಂತ ಮಹಿಳಾ ಮಣಿಗಳಿಗೆ ಬಸ್ ಟಿಕೆಟ್ ಫ್ರೀ. ಎಲ್ಲಿ ಬೇಕಾದ್ರೂ ಸಂಚಾರ ಮಾಡಬಹುದಾಗಿದೆ. ಹೀಗಾಗಿ ಬಸ್ ಏರೋಕೆ ಮಹಿಳೆಯರು ತುದಿಗಾಲಲ್ಲಿ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಪೈಕಿ ಮೊದಲ ಯೋಜನೆಯಾದ ಮಹಿಳೆಯರಿಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡುವ ಶಕ್ತಿ ಯೋಜನೆಗೆ ಇಂದು ಬೆಳಗ್ಗೆ 11 ಗಂಟೆಗೆ ಚಾಲನೆ ಸಿಗಲಿದೆ. ಸ್ಮಾರ್ಟ್ಕಾರ್ಡ್, ಲೋಗೋ ಅನಾವರಣ ಆಗಲಿದೆ.

ವಿಧಾನಸೌಧದಲ್ಲಿ ಶಜ್ತಿ ಯೋಜನೆಗೆ ಚಾಲನೆ ಕೊಟ್ಟ ನಂತರ ಮುಖ್ಯಮಂತ್ರಿ ಮತ್ತು ಟೀಂ ಬಿಎಂಟಿಸಿ ಬಸ್ನಲ್ಲಿ ಮೆಜೆಸ್ಟಿಕ್ಗೆ ಪ್ರಯಾಣ ಬೆಳೆಸಲಿದ್ದಾರೆ. ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ದೂರದ ಊರುಗಳಿಗೆ ತೆರಳುವ ಬಸ್ಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಮೆಜೆಸ್ಟಿಕ್ನಿಂದ ವಿಧಾನಸೌಧಕ್ಕೆ ರಿಟರ್ನ್ ಬರಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಗರದಾದ್ಯಂತ 2,000 ಹೋಮ್‍ಗಾರ್ಡ್ಸ್ ನಿಯೋಜನೆ