Webdunia - Bharat's app for daily news and videos

Install App

ಕರ್ನಾಟಕ ಈ ಚುನಾವಣೆಯಿಂದ ಐತಿಹಾಸಿಕ ಬದಲಾವಣೆ ಖಚಿತ: ಅಣ್ಣಾಮಲೈ

Webdunia
ಮಂಗಳವಾರ, 25 ಏಪ್ರಿಲ್ 2023 (15:00 IST)
ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಹತಾಶೆಯಿಂದ ಕಾಂಗ್ರೆಸ್ಪಕ್ಷ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದೆ.ಆದರೆ ಕರ್ನಾಟಕ ಜನರು ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಕರ್ನಾಟಕ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಹತಾಶೆಯಿಂದ ತಳವಿಲ್ಲದ ಆರೋಪ ಮಾಡುತ್ತಿದೆ. ಕ್ಷೇತ್ರದಲ್ಲಿ ನಮಗೆ ಜನ ಬೆಂಬಲ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಮೂರೂವರೆ ವರ್ಷ ಕೆಲಸ ಮಾಡಿದ್ದೇವೆ. ನಮ್ಮ ಡಬಲ್ ಇಂಜಿನ್ ಸರ್ಕಾರದ ಸಾಧನೆ ಕಾಣುತ್ತಿದೆ. ಹೀಗಾಗಿ ಕರ್ನಾಟಕ ಜನ ಈ ಬಾರಿ ಬಿಜೆಪಿಗೆ ಬಹುಮತ ನೀಡಲು ನಿರ್ಧಾರ ಮಾಡಿದ್ದಾರೆ....ಸುದ್ದಿಗೋಷ್ಠಿಯಲ್ಲಿ ಮೇಕದಾಟು ಯೋಜನೆಯ ಬಗ್ಗೆ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ಕೇಂದ್ರದ ತೀರ್ಮಾನದಂತೆ ನಡೆಯುತ್ತೇವೆ. ಕೇಂದ್ರ ಏನು ತೀರ್ಮಾನ ಮಾಡುತ್ತದೆಯೋ ಅದೇ ನಮ್ಮ ನಿಲುವಾಗಲಿದೆ. ಇದರಲ್ಲಿ ಅಂತರಾಜ್ಯ ವಿವಾದ ಇದೆ. ಹೀಗಾಗಿ ಸಂಸತ್ತಿನಲ್ಲಿ ಕೇಂದ್ರ ಏನು ಉತ್ತರ ನೀಡಿದೆಯೋ ಅದೇ ಉತ್ತರವನ್ನು ಇಲ್ಲಿರುವ ಲೀಡರ್ಸ್ ಕೂಡ ಒಪ್ಪಿದ್ದಾರೆ, ತಮಿಳುನಾಡು ಕೂಡ ಒಪ್ಪಿದ್ದಾರೆ. ಇದು ಪ್ರಜಾಪ್ರಭುತ್ವ ಇರುವ ದೇಶ. ಏನೇ ಮಾಡುವಾಗಲೂ ಒಂದು ನಿಯಮ ಇರುತ್ತದೆ. ಆ ನಿಯಮವನ್ನು ತಮಿಳುನಾಡು, ಕರ್ನಾಟಕ ಯಾರೇ ಇರಲಿ ಫಾಲೋ ಮಾಡಬೇಕಾಗುತ್ತದೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments