Webdunia - Bharat's app for daily news and videos

Install App

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಹಾಕಲ್ಲ, ಶಾಸಕರಿಗೆ ಮಾತ್ರ ನಿದ್ರೆ ಮಾಡಲೂ ಐಷಾರಾಮಿ ಸೋಫಾ

Krishnaveni K
ಬುಧವಾರ, 5 ಮಾರ್ಚ್ 2025 (11:44 IST)
Photo Credit: X
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ, ಅನ್ನಭಾಗ್ಯ ಯೋಜನೆ ಹಣ ಬಂದಿಲ್ಲ ಎಂದು ಜನ ಹಿಡಿಶಾಪ ಹಾಕುತ್ತಿದ್ದರೆ ಇತ್ತ ಶಾಸಕರಿಗೆ ಮಾತ್ರ ವಿಧಾನಸಭೆಯಲ್ಲಿ ಮಲಗಿ ನಿದ್ರೆ ಮಾಡಲೂ ಐಷಾರಾಮಿ ಸೋಫಾ ತರಿಸಲಾಗಿದೆ. ಇದು ಈಗ ಭಾರೀ ಟೀಕೆಗೆ ಗುರಿಯಾಗಿದೆ.

ರಾಜ್ಯ ವಿಧಾನಮಂಡಲ ಅಧಿವೇಶನ ಈಗ ನಡೆಯುತ್ತಿದ್ದು, ನಾಡಿದ್ದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಸ್ಪೀಕರ್ ಯುಟಿ ಖಾದರ್ ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನದ ನಿದ್ರೆ ಮಾಡಲೂ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಪಡಸಾಲೆಯಲ್ಲಿ ಕಾಲು ಚಾಚಿ ಮಧ್ಯಾಹ್ನದ ಹೊತ್ತು ಕೆಲವು ಕ್ಷಣ ನಿದ್ರೆ ಮಾಡಲೂ ಅನುವು ಮಾಡಿಕೊಡುವಂತಹ ಸೋಫಾಗಳನ್ನು ತರಿಸಲಾಗಿದೆ. ಇದರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆಗೆ ಗುರಿಯಾಗಿದೆ.

ಒಂದೆಡೆ ಸರ್ಕಾರ ಗೃಹಲಕ್ಷ್ಮಿ ಹಣ ಹಾಕಲೂ ದುಡ್ಡಿಲ್ಲವೆನ್ನುತ್ತಿದೆ. ಆದರೆ ಶಾಸಕರಿಗೆ ಮಾತ್ರ ಹೇಳಿದ ತಕ್ಷಣ ಐಷಾರಾಮಿ ಆಸನಗಳು ಬರುತ್ತಿವೆ. ಇದಕ್ಕೆಲ್ಲಾ ದುಡ್ಡು ಎಲ್ಲಿಂದ? ಜನಪ್ರತಿನಿಧಿಗಳು ನಿದ್ರೆ ಮಾಡಲು ಜನರ ತೆರಿಗೆ ದುಡ್ಡು ಬೇಕಾ ಎಂದು ಹಲವರು ಸೋಷಿಯಲ್ ಮೀಡಿಯಾಗಳಲ್ಲಿ ಕಿಡಿ ಕಾರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments