Webdunia - Bharat's app for daily news and videos

Install App

ಶಾಸಕರ ಕಾವಲು ಕಾಯೋದೇ ಈಗ ನಾಯಕರ ಕೆಲಸ! ಬೆಳ್ಳಂ ಬೆಳಿಗ್ಗೆ ಎಂಟಿಬಿ ಮನೆ ಮುಂದೆ ಪ್ರತ್ಯಕ್ಷರಾದ ಡಿಕೆಶಿ

Webdunia
ಶನಿವಾರ, 13 ಜುಲೈ 2019 (10:18 IST)
ಬೆಂಗಳೂರು: ರಾಜ್ಯ ರಾಜಕೀಯ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಕೂಡಾ ಈಗ ರೆಸಾರ್ಟ್ ನಲ್ಲಿ ತಮ್ಮ ತಮ್ಮ ಪಕ್ಷದ ಶಾಸಕರನ್ನು ಕೂಡಿಟ್ಟು ಕಾವಲು ಕಾಯುವ ಕೆಲಸ ಶುರುವಾಗಿದೆ.


ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ತಮ್ಮ ಪಕ್ಷದ ಪರವಾಗಿಯೇ ಮತ ಹಾಕುವಂತೆ ನೋಡಿಕೊಳ್ಳುವ ಜವಾಬ್ಧಾರಿ ಜೆಡಿಎಸ್ ಮತ್ತು ಕಾಂಗ್ರೆಸ್ ನದ್ದಾದರೆ, ತಮ್ಮ ಪಕ್ಷದ ಶಾಸಕರು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳುವುದು ಬಿಜೆಪಿ ನಾಯಕರ ತಲೆನೋವಾಗಿದೆ.

ಹೀಗಾಗಿ ಮೂರೂ ಪಕ್ಷದ ಶಾಸಕರೂ ರೆಸಾರ್ಟ್ ಸೇರಿಕೊಂಡಿದ್ದಾರೆ. ಆಪರೇಷನ್ ಅಥವಾ ರಿವರ್ಸ್ ಆಪರೇಷನ್ ಆಗದಂತೆ ಸೋಮವಾರದವರೆಗೆ ಶಾಸಕರನ್ನು ಕಾವಲು ಕಾಯಬೇಕಿದೆ. ಈ ನಡುವೆ ತಮ್ಮ ಬಂಡಾಯ ಶಾಸಕರ ಮನ ಒಲಿಸುವ ಕೆಲಸದಲ್ಲಿ ಕಾಂಗ್ರೆಸ್ ನಾಯಕರು ಬ್ಯುಸಿಯಾಗಿದ್ದಾರೆ.

ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇ ಎನಿಸಿಕೊಂಡಿರುವ ಡಿಕೆ ಶಿವಕುಮಾರ್ ಬೆಳ್ಳಂ ಬೆಳಿಗ್ಗೆಯೇ ಈಗಾಗಲೇ ರಾಜೀನಾಮೆ ನೀಡಿರುವ ಎಂಟಿಬಿ ನಾಗರಾಜ್ ಮನೆಗೆ ಹಾಜರಾಗಿದ್ದು, ಶಾಸಕರ ಮನ ಒಲಿಸುವ ಕೆಲಸ ಮಾಡಿದ್ದಾರೆ. ಇದೀಗ ಕಾಂಗ್ರೆಸ್ ನಾಯಕರಲ್ಲಿ ಬಂಡಾಯ ಶಾಸಕರ ಮನ ಒಲಿಸುವ ಕೆಲಸ ಜೋರಾಗಿದೆ. ಆದರೆ ಈ ತಂತ್ರಗಳು ಕೈ ಹಿಡಿಯುತ್ತಾ? ಸರ್ಕಾರ ವಿಶ್ವಾಸ ಮತದಲ್ಲಿ ಗೆಲ್ಲುತ್ತಾ ಎಂಬುದೇ ಸದ್ಯದ ಕುತೂಹಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments