Daily Horoscope

ಮುಸ್ಲಿಮರಿಗೆ ಮೀಸಲಾತಿ ಘೋಷಣೆ ಮಾಡಿದ ತಕ್ಷಣ ವಿಧೇಯಕವನ್ನೂ ಮಂಡಿಸಿದ ರಾಜ್ಯ ಸರ್ಕಾರ

Krishnaveni K
ಮಂಗಳವಾರ, 18 ಮಾರ್ಚ್ 2025 (17:31 IST)
Photo Credit: X
ಬೆಂಗಳೂರು: ಸರ್ಕಾರೀ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರು ಸೇರಿದಂತೆ ಅಲ್ಪ ಸಂಖ್ಯಾತರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ ತಕ್ಷಣವೇ ಇಂದು ಸದನದಲ್ಲಿ ವಿಧೇಕಯ ಮಂಡನೆಯಾಗಿದೆ.

ಬಜೆಟ್ ಆಯವ್ಯಯಕ್ಕೆ ವಿಧಾನಮಂಡಲ ಅಂಗೀಕಾರವಾಗುವ ಮೊದಲೇ ಮುಸ್ಲಿಮರಿಗೆ ಮೀಸಲಾತಿ ವಿಧೇಯಕವನ್ನು ತ್ವರಿತವಾಗಿ ಮಂಡಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಸಾಮಾನ್ಯವಾಗಿ ಆಯವ್ಯಯ ಅಂಗೀಕಾರದ ಬಳಿಕವೇ ವಿಧೇಯಕಗಳ ಮಂಡನೆಯಾಗುತ್ತದೆ. ಆದರೆ ಇಂದು ಸಚಿವ ಎಚ್ ಕೆ ಪಾಟೀಲ್ ಮೀಸಲಾತಿ ವಿಧೇಯಕ ಮಂಡಿಸಿದ್ದಾರೆ.

ಇದುವರೆಗೆ ಕೇವಲ ಎಸ್ ಸಿ, ಎಸ್ ಟಿ ಪಂಗಡದವರಿಗೆ ಮಾತ್ರ ಗುತ್ತಿಗೆಗಳಲ್ಲಿ ಮೀಸಲಾತಿಯಿತ್ತು. ಆದರೆ ಈಗ ಪ್ರವರ್ಗ ಬಿ ರ ಅಡಿಯಲ್ಲಿ ಮುಸ್ಲಿಮರಿಗೂ ಮೀಸಲಾತಿಯಿರಲಿದೆ.  ಈ ವಿಧೇಯಕದ ಪ್ರಕಾರ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ, ಕರ್ನಾಟಕ ಗ್ರಾಮಸ್ವರಾಜ್ಯ ಮತ್ತು ಪಂಚಾಯತ್ ರಾಜ್, ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ, ಪುರಸಭೆ, ಪಟ್ಟಣ ಪಂಚಾಯತಿ, ನಗರಾಭಿವೃದ್ಧಿ ಪ್ರಾಧಿಕಾರಿಗಳ ಸರ್ಕಾರೀ ಗುತ್ತಿಗೆಗಳಲ್ಲಿ ಮೀಸಲಾತಿ ಜಾರಿಗೆ ಬರಲಿದೆ.

ಇನ್ನು, ವಿಧೇಯಕದ ವಿರುದ್ಧ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಹಾಗಿದ್ದರೂ ಸರ್ಕಾರ ವಿಧೇಯಕ ಮಂಡಿಸುವಲ್ಲಿ ಯಶಸ್ವಿಯಾಗಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಎಚ್ ಕೆ ಪಾಟೀಲ್, ಬಿಜೆಪಿಯವರಿಗೆ ರಾಜಕೀಯ ಮಾಡುವುದೇ ಕೆಲಸ. ನಾವು ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡಲು ಹೊರಟಿದ್ದೇವೆ. ಇದು ಯಾರ ತುಷ್ಠೀಕರಣವೂ ಅಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments