Webdunia - Bharat's app for daily news and videos

Install App

ಕೇಂದ್ರದ ಪಾಲಿಗೆ ಕರ್ನಾಟಕ ಇಲ್ಲವೇನೋ: ಎಚ್.ಡಿ.ಕುಮಾರಸ್ವಾಮಿ ಕಿಡಿ

Webdunia
ಗುರುವಾರ, 2 ಸೆಪ್ಟಂಬರ್ 2021 (19:30 IST)
ನನ್ನ ಬಗ್ಗೆ ನಮ್ಮ ಪಕ್ಷದ ಬಗ್ಗೆ ಮಾಹಿತಿ ಇಲ್ಲ ಅಂದ್ರೆ ಪ್ರಧಾನಮಂತ್ರಿ ಅವರ ಹತ್ತಿರ ಕೇಳಿ ತಿಳಿದುಕೊಳ್ಳಲಿ ಅಂತಾ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ಗೆ ಮಾಜಿ ಸಿಎಂ ಹೆಚ್.
ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ರು.
ರಾಮನಗರ ಜಿಲ್ಲೆ ಚನ್ನಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕವಿ ಡಾ.ಸಿದ್ದಲಿಂಗಯ್ಯ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ್ರು ದೇಶವನ್ನ ಆಳುತ್ತಿರೋ ಪಕ್ಷ ಎರಡನೇ ಬಾರಿಗೆ ದೇಶವನ್ನ ಆಳುತ್ತಿದ್ದಾರೆ, ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದನ್ನ ಮೊದಲು ನಿಲ್ಲಿಸಬೇಕು, ನನಗೆ ಬುದ್ದಿ ಹೇಳುವ ಮೊದಲು ಅವರ ನಡುವಳಿಕೆ ಏನೆಂಬುದನ್ನ ನೋಡಿಕೊಳ್ಳಲಿ, ಜೆಡಿಎಸ್ ಪಕ್ಷ ಹಾಗೂ ಕುಮಾರಸ್ವಾಮಿ ಬಗ್ಗೆ ಗೊತ್ತಿಲ್ಲ ಅಂದ್ರೆ ತಿಳಿದುಕೊಳ್ಳಲಿ ಅಂತಾ ಅರುಣ್ ಸಿಂಗ್‌ಗೆ ಹೆಚ್.ಡಿ.ಕೆ ಎಚ್ಚರಿಕೆ ನೀಡಿದ್ರು.
ಕೇಂದ್ರದಿಂದ ರಾಜ್ಯಕ್ಕೆ ಅನುದಾನ ನೀಡಿಲ್ಲ ಎಂಬ ವಿಚಾರವಾಗಿ ಮಾತನಾಡಿ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಇದೆ ಎಂಬುದೇ ಗೊತ್ತಿಲ್ಲ, ಕರ್ನಾಟಕ ರಾಜ್ಯದ ಮ್ಯಾಪ್ ಇದೀಯೋ ಕಿತ್ತಾಕಿದರೋ ಗೊತ್ತಿಲ್ಲ, ರಾಜ್ಯಕ್ಕೆ ಏನ್ ತೊಂದರೆ ಆಗುತ್ತಿದ್ದೆ, ಅನ್ಯಾಯವಾಗಿದೆ ಎಂಬುದುನ್ನು ಉಸ್ತುವಾರಿಗಳು ಗಮನಿಸಿ ಪರಿಹಾರ ನೀಡಬೇಕು, ಬರೀ ಪಕ್ಷ ಸಂಘಟನೆ ಮಾಡುವುದಲ್ಲ ಅಂತಾ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments