Webdunia - Bharat's app for daily news and videos

Install App

ಇನ್ನೂ ನಿಂತಿಲ್ಲ ಬೆಲೆ ಏರಿಕೆ ಪರ್ವ: ಹಾಲು, ಡೀಸೆಲ್, ಬಸ್ ಬಳಿಕ ಈಗ ಇದೊಂದು ಬೆಲೆ ಏರಿಕೆ ಬಾಕಿ

Krishnaveni K
ಗುರುವಾರ, 3 ಏಪ್ರಿಲ್ 2025 (10:38 IST)
ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಒಂದೊಂದೇ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಜನರಿಗೆ ಬರೆ ಎಳೆಯುತ್ತಲೇ ಇದೆ. ಬಸ್, ಹಾಲು, ಡೀಸೆಲ್, ವಿದ್ಯುತ್ ಬಳಿಕ ಈಗ ಇದೊಂದು ಬೆಲೆ ಏರಿಕೆ ಬಾಕಿಯಿದೆ.

ಮೊನ್ನೆಯಷ್ಟೇ ಹಾಲಿನ ಬೆಲೆ ಏರಿಕೆ ಮಾಡಿದ್ದ ಸರ್ಕಾರ ರೈತರಿಗೆ ಪ್ರೋತ್ಸಾಹ ಧನ ಕೊಡಲು ಬೆಲೆ ಏರಿಕೆ ಮಾಡುವುದಾಗಿ ಸಮಜಾಯಿಷಿ ಕೊಟ್ಟಿತ್ತು.ಇದಕ್ಕೆ ಮೊದಲು ಬಸ್ ದರ ಏರಿಕೆ ಮಾಡಿತ್ತು. ಇದರ ನಡುವೆ ವಿದ್ಯುತ್ ದರವನ್ನೂ ಏರಿಕೆ ಮಾಡಲಾಗಿತ್ತು. ಏಪ್ರಿಲ್ 1 ರಿಂದ ಬೆಂಗಳೂರಿಗರಿಗೆ ಕಸದ ಟ್ಯಾಕ್ಸ್ ವಿಧಿಸಲಾಗುತ್ತಿದೆ.

ಇದರ ನಡುವೆ ನಿನ್ನೆ ಡೀಸೆಲ್ ಮೇಲಿನ ಸುಂಕ ಹೆಚ್ಚಳ ಮಾಡಿ ಮತ್ತೊಂದು ಬರೆ ಹಾಕಿದೆ. ರಾಜ್ಯ ಸರ್ಕಾರದ ಬೆಲೆ ಏರಿಕೆ ಬರೆ ಇಲ್ಲಿಗೇ ನಿಂತಿಲ್ಲ. ಮುಂದಿನದ್ದು ಬೆಂಗಳೂರಿಗರಿಗೆ ನೀರಿನ ದರ ಏರಿಕೆ ಬಿಸಿ ತಗುಲಲಿದೆ.

ಸದನದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ನೀರಿಗೆ ಪ್ರತೀ ಲೀಟರ್ ಗೆ 1 ಪೈಸೆಯಷ್ಟು ಏರಿಕೆ ಮಾಡುವುದಾಗಿ ಹೇಳಿದ್ದರು. ಹೀಗಾಗಿ ಮುಂದಿನದ್ದು ಕಾವೇರಿ ನೀರಿನ ಸರದಿ. ಈ ಬಗ್ಗೆ ಸದ್ಯದಲ್ಲೇ ಸರ್ಕಾರ ಘೋಷಣೆ ಮಾಡಲಿದೆ. ಹೀಗಾಗಿ ಇನ್ನೊಂದು ಅಗತ್ಯವಸ್ತುವಿನ ಬೆಲೆ ಏರಿಕೆಗೆ ಜನ ಸಿದ್ಧರಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments