Webdunia - Bharat's app for daily news and videos

Install App

ಇನ್ನೂ ನಿಂತಿಲ್ಲ ಬೆಲೆ ಏರಿಕೆ ಪರ್ವ: ಹಾಲು, ಡೀಸೆಲ್, ಬಸ್ ಬಳಿಕ ಈಗ ಇದೊಂದು ಬೆಲೆ ಏರಿಕೆ ಬಾಕಿ

Krishnaveni K
ಗುರುವಾರ, 3 ಏಪ್ರಿಲ್ 2025 (10:38 IST)
ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಒಂದೊಂದೇ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಜನರಿಗೆ ಬರೆ ಎಳೆಯುತ್ತಲೇ ಇದೆ. ಬಸ್, ಹಾಲು, ಡೀಸೆಲ್, ವಿದ್ಯುತ್ ಬಳಿಕ ಈಗ ಇದೊಂದು ಬೆಲೆ ಏರಿಕೆ ಬಾಕಿಯಿದೆ.

ಮೊನ್ನೆಯಷ್ಟೇ ಹಾಲಿನ ಬೆಲೆ ಏರಿಕೆ ಮಾಡಿದ್ದ ಸರ್ಕಾರ ರೈತರಿಗೆ ಪ್ರೋತ್ಸಾಹ ಧನ ಕೊಡಲು ಬೆಲೆ ಏರಿಕೆ ಮಾಡುವುದಾಗಿ ಸಮಜಾಯಿಷಿ ಕೊಟ್ಟಿತ್ತು.ಇದಕ್ಕೆ ಮೊದಲು ಬಸ್ ದರ ಏರಿಕೆ ಮಾಡಿತ್ತು. ಇದರ ನಡುವೆ ವಿದ್ಯುತ್ ದರವನ್ನೂ ಏರಿಕೆ ಮಾಡಲಾಗಿತ್ತು. ಏಪ್ರಿಲ್ 1 ರಿಂದ ಬೆಂಗಳೂರಿಗರಿಗೆ ಕಸದ ಟ್ಯಾಕ್ಸ್ ವಿಧಿಸಲಾಗುತ್ತಿದೆ.

ಇದರ ನಡುವೆ ನಿನ್ನೆ ಡೀಸೆಲ್ ಮೇಲಿನ ಸುಂಕ ಹೆಚ್ಚಳ ಮಾಡಿ ಮತ್ತೊಂದು ಬರೆ ಹಾಕಿದೆ. ರಾಜ್ಯ ಸರ್ಕಾರದ ಬೆಲೆ ಏರಿಕೆ ಬರೆ ಇಲ್ಲಿಗೇ ನಿಂತಿಲ್ಲ. ಮುಂದಿನದ್ದು ಬೆಂಗಳೂರಿಗರಿಗೆ ನೀರಿನ ದರ ಏರಿಕೆ ಬಿಸಿ ತಗುಲಲಿದೆ.

ಸದನದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ನೀರಿಗೆ ಪ್ರತೀ ಲೀಟರ್ ಗೆ 1 ಪೈಸೆಯಷ್ಟು ಏರಿಕೆ ಮಾಡುವುದಾಗಿ ಹೇಳಿದ್ದರು. ಹೀಗಾಗಿ ಮುಂದಿನದ್ದು ಕಾವೇರಿ ನೀರಿನ ಸರದಿ. ಈ ಬಗ್ಗೆ ಸದ್ಯದಲ್ಲೇ ಸರ್ಕಾರ ಘೋಷಣೆ ಮಾಡಲಿದೆ. ಹೀಗಾಗಿ ಇನ್ನೊಂದು ಅಗತ್ಯವಸ್ತುವಿನ ಬೆಲೆ ಏರಿಕೆಗೆ ಜನ ಸಿದ್ಧರಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments