Webdunia - Bharat's app for daily news and videos

Install App

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Krishnaveni K
ಗುರುವಾರ, 17 ಏಪ್ರಿಲ್ 2025 (12:30 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ನಗರಗಳಲ್ಲಿ ಖಾಸಗಿ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡುತ್ತೇವೆ ಎಂದು ಹೆಸರು ಹೇಳಿಕೊಂಡು ಲಕ್ಷಗಟ್ಟಲೇ ಡೊನೇಷನ್ ವಸೂಲಿ ಮಾಡುವುದು, ಪೋಷಕರ ಸಂದರ್ಶನ ಮಾಡುವುದು ಮಾಡುತ್ತಿದ್ದರು. ಆದರೆ ಇನ್ನು ಮುಂದೆ ಹೀಗೆ ಮಾಡುವಂತಿಲ್ಲ. ಖಾಸಗಿ ಶಾಲೆಗಳಿಗೆ ಸರ್ಕಾರ ಕೆಲವು ಕಟ್ಟುನಿಟ್ಟಿನ ರೂಲ್ಸ್ ಮಾಡಿದೆ. ಅದರ ವಿವರ ಇಲ್ಲಿದೆ ನೋಡಿ.

ಖಾಸಗಿ ಶಾಲೆಗಳು ಮನಸೋ ಇಚ್ಛೆ ಫೀಸ್ ಏರಿಸಿರುವುದರ ಬಗ್ಗೆ ಈ ಬಾರಿ ಸಾಕಷ್ಟು ದೂರುಗಳು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಕೆಲವು ಕಡ್ಡಾಯ ನಿಯಮ ರೂಪಿಸಿದೆ. ಈ ಮೂಲಕ ಖಾಸಗಿ ಶಾಲೆಗಳ ದಬ್ಬಾಳಿಕೆಗೆ ಕಡಿವಾಣ ಹಾಕಲು ಪ್ರಯತ್ನಿಸಿದೆ.

ದಾಖಲಾತಿ ಹೆಸರಿನಲ್ಲಿ ಕೆಲವು ಶಾಲೆಗಳಲ್ಲಿ ಪೋಷಕರ ಸಂದರ್ಶನ ಮಾಡಲಾಗುತ್ತದೆ. ಇಂತಹ ಘಟನೆಗಳ ಬಗ್ಗೆ ದೂರು ಬಂದಲ್ಲಿ ಇನ್ನು ಮುಂದೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ನಿಯಮಗಳೇನು?
-ಶುಲ್ಕದ ಸಂಪೂರ್ಣ ಮಾಹಿತಿಯನ್ನು ಮಾಹಿತಿ ಪುಸ್ತಕ, ನೋಟಿಸ್ ಬೋರ್ಡ್ ನಲ್ಲಿ ನೀಡಬೇಕು.
-ದಾಖಲಾತಿ ಸಂದರ್ಭದಲ್ಲಿ ಮಕ್ಕಳು, ಪೋಷಕರ ಸಂದರ್ಶನ ಮಾಡುವಂತಿಲ್ಲ.
-ಶಾಲಾ ಆಡಳಿತ ಮಂಡಳಿಯು ತಾವು ಅಧಿಸೂಚಿಸಿದ ಶುಲ್ಕದ ಹೊರತಾಗಿ ಯಾವುದೇ ಶುಲ್ಕ ವಸೂಲಿ ಮಾಡುವಂತಿಲ್ಲ.
-ಖಾಸಗಿ ಶಾಲೆಗಳು ಶೇ.25 ರಷ್ಟು ಆರ್ ಟಿಇ ಸೀಟುಗಳನ್ನು ಕಡ್ಡಾಯವಾಗಿ ಮೀಸಲಿಡಬೇಕು.
-ಸಹ ಶಿಕ್ಷಣ ಹೊಂದಿರುವ ಶಾಲೆಗಳಲ್ಲಿ ಶೇ.50 ರಷ್ಟು ಹೆಣ್ಣು ಮಕ್ಕಳಿಗೆ ಮೀಸಲಿರಬೇಕು.
-ಎಸ್ ಸಿ/ಎಸ್ ಟಿ ಆಡಳಿತ ಮಂಡಳಿಯ ಶಾಲೆಗಳಲ್ಲಿ ಕಡ್ಡಾಯವಾಗಿ 50% ಎಸ್ ಸಿ/ಎಸ್ ಟಿ ಮಕ್ಕಳಿರಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ
Show comments