Webdunia - Bharat's app for daily news and videos

Install App

ಮಳೆಯ ಅಬ್ಬರಕ್ಕೆ ಕೊನೆಗೂ ಕಡಿಮೆಯಾಯ್ತು: ಶಿರಾಡಿ ಘಾಟಿ ಓಪನ್ ಆಗಿದ್ಯಾ

Krishnaveni K
ಮಂಗಳವಾರ, 23 ಜುಲೈ 2024 (10:21 IST)
ಬೆಂಗಳೂರು: ಕರ್ನಾಟಕದಲ್ಲಿ ವಿಪರೀತ ಮಳೆಯಿಂದಾಗಿ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ಕಳೆದ ನಾಲ್ಕು ದಿನಗಳಿಂದ ಬಂದ್ ಆಗಿ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿತ್ತು.

ಆದರೆ ಈಗ ಕರಾವಳಿ ಸೇರಿದಂತೆ ಎಲ್ಲೆಡೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರಿಂದಾಗಿ ಶಿರಾಡಿ ಘಾಟಿಯೂ ಓಪನ್ ಆಗಿದೆ. ಮೊನ್ನೆ ಸಂಜೆಯಿಂದಲೇ ಎಲ್ಲಾ ವಾಹನಗಳ ಸಂಚಾರಕ್ಕೂ ಅನುವು ಮಾಡಿಕೊಡಲಾಗುತ್ತಿದೆ. ಇದುವರೆಗೆ ಹಗಲು ಹೊತ್ತು ಮಾತ್ರ ಬಸ್ ಸಂಚಾರವಿತ್ತು.

ಆದರೆ ಮೊನ್ನೆ ರಾತ್ರಿಯಿಂದಲೇ ಸ್ಲೀಪರ್, ಅಂಬಾರಿ ಸೇರಿದಂತೆ ಎಲ್ಲಾ ಬಸ್ ಗಳನ್ನು ರಾತ್ರಿಯೂ ಬಿಡಲಾಗುತ್ತಿದೆ ಎಂದು ಕೆಎಸ್ ಆರ್ ಟಿಸಿ ಮಾಹಿತಿ ನೀಡಿದೆ. ಇದರಿಂದಾಗಿ ಕರಾವಳಿ ಭಾಗಗಳಿಗೆ ತೆರಳುವ ಜನರು ನಿಟ್ಟುಸಿರು ಬಿಡುವಂತಾಗಿದೆ. ಇದೀಗ ಎಂದಿನಂತೆ ಕೆಎಸ್ ಆರ್ ಟಿಸಿ ಬುಕಿಂಗ್ ನಡೆಯುತ್ತಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಇನ್ನೆರಡು ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಗಿದ್ದರೂ ಮೊದಲಿನ ಅಬ್ಬರ ಕೊಂಚ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಹಾಗಿದ್ದರೂ ಮುಂಜಾಗ್ರತಾ ಕ್ರಮವಾಗಿ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments